ಬ್ರೇಕಿಂಗ್ ನ್ಯೂಸ್
16-01-26 07:33 pm Mangalore Correspondent ಕರಾವಳಿ
ಮಂಗಳೂರು, ಜ.16 : ಕರಾವಳಿಯ ಸಾರಿಗೆ ಸಂಪರ್ಕ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡಲು ಕರ್ನಾಟಕ ಕರಾವಳಿ ಜಲಸಾರಿಗೆ ಮಂಡಳಿ (ಮರಿಟೈಮ್ ಬೋರ್ಡ್) ಎರಡು ಬೃಹತ್ ಯೋಜನೆಗಳನ್ನು ಘೋಷಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಂಚಾರ ದಟ್ಟಣೆಗೆ ಪರ್ಯಾಯವಾಗಿ ಮಂಗಳೂರಿನಿಂದ ಕುಂದಾಪುರದ ಮರವಂತೆಯ ವರೆಗೆ ಸಾಗರ ಮಾರ್ಗದ ‘ಫೆರ್ರಿ’ (ದೋಣಿ) ಸೇವೆ ಮತ್ತು ಮಂಗಳೂರು ನಗರದ ಸುತ್ತಮುತ್ತ ‘ಜಲ ಮೆಟ್ರೋ’ ಜಾರಿಗೆ ಯೋಜನೆ ರೂಪಿಸಿದೆ.
ಮಂಗಳೂರು - ಮರವಂತೆ ಕರಾವಳಿ ಫೆರ್ರಿ ಸೇವೆ
ಮಂಗಳೂರಿನಿಂದ ಕುಂದಾಪುರ ತಾಲೂಕಿನ ಮರವಂತೆಯ ವರೆಗೆ ಸುಮಾರು 110 ಕಿ.ಮೀ. ಉದ್ದದ ಜಲಮಾರ್ಗವನ್ನು ಅಭಿವೃದ್ಧಿಪಡಿಸುತ್ತಿದೆ. ಫೆರ್ರಿ ಸೇವೆಯು ಹಳೆ ಮಂಗಳೂರು ಬಂದರು, ಹೆಜಮಾಡಿ, ಮಲ್ಪೆ, ಕೋಟ ಮತ್ತು ಮರವಂತೆ ಹೀಗೆ ಒಟ್ಟು ಐದು ಕಡೆಗಳಲ್ಲಿ ನಿಲುಗಡೆ ಹೊಂದಿರಲಿದೆ. ಅಂದಾಜು 37.8 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನ ಗೊಳಿಸಲಾಗುವುದು. ಆಯ್ಕೆಯಾದ ಸಂಸ್ಥೆಗೆ 20 ವರ್ಷಗಳ ಕಾಲ ನಿರ್ವಹಣೆಯ ಜವಾಬ್ದಾರಿ ನೀಡಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಿಲುಗಡೆ ಇರುವ ಐದೂ ಸ್ಥಳಗಳಲ್ಲಿ ಅತ್ಯಾಧುನಿಕ ಜೆಟ್ಟಿಗಳನ್ನು (ದೋಣಿ ನಿಲ್ದಾಣ) ನಿರ್ಮಿಸಲು ಉದ್ದೇಶಿಸಲಾಗಿದೆ.
ಮಂಗಳೂರಿಗೆ ಜಲ ಮೆಟ್ರೋ ಯೋಜನೆ
ಇದೇ ವೇಳೆ, ಮಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುಮಾರು 180 ಕೋಟಿ ರೂ. ಹೂಡಿಕೆಯೊಂದಿಗೆ ‘ಜಲ ಮೆಟ್ರೋ’ ಯೋಜನೆಯನ್ನು ರೂಪಿಸಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಮಳವೂರು ಸೇತುವೆಯಿಂದ ಜಪ್ಪಿನಮೊಗರು ಸೇತುವೆಯ ವರೆಗೆ ಈ ಸೇವೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಗುರುಪುರ ಮತ್ತು ನೇತ್ರಾವತಿ ನದಿಗಳ ಮೂಲಕ ಹಳೆ ಮಂಗಳೂರು ಬಂದರನ್ನು ಸಂಪರ್ಕಿಸುವ ಈ ಮಾರ್ಗವು ನಗರದ ವಿವಿಧ ಭಾಗಗಳನ್ನು ಜೋಡಿಸಲಿದೆ.
ಪ್ರವಾಸೋದ್ಯಮಕ್ಕೆ ಬೂಸ್ಟ್ ಸಾಧ್ಯತೆ
ಮರವಂತೆಯಂತಹ ಪ್ರವಾಸಿ ತಾಣಗಳಿಗೆ ಸಮುದ್ರ ಮಾರ್ಗದ ಮೂಲಕ ಪ್ರಯಾಣಿಸುವುದು ಪ್ರವಾಸಿಗರಿಗೆ ಹೊಸ ಅನುಭವ ನೀಡಲಿದೆ. ಪರಿಸರ ಸ್ನೇಹಿ ಮತ್ತು ಕಡಿಮೆ ವೆಚ್ಚದ ಈ ಜಲ ಸಾರಿಗೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆರ್ಥಿಕತೆಗೆ ದೊಡ್ಡ ಬಲ ನೀಡಲಿದೆ ಎಂದು ಮಂಡಳಿಯ ಅಧಿಕಾರಿಗಳು ಆಶಿಸಿದ್ದಾರೆ.
The Karnataka Maritime Board has announced plans to introduce a sea-route ferry service between Mangaluru and Maravanthe, along with a Water Metro project in Mangaluru. Aimed at easing NH-66 traffic and boosting coastal tourism, the projects are expected to improve connectivity and provide an eco-friendly transport alternative.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am