Suniel Shetty, Ahan Shetty, Kuthar Koragajja Shrine: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ; ಪುತ್ರ ಅಹಾನ್ ಶೆಟ್ಟಿ ನಟನೆಯ ಬಾರ್ಡರ್-2 ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ 

16-01-26 10:28 pm       Mangalore Correspondent   ಕರಾವಳಿ

ಕರಾವಳಿಯ ಕಾರಣಿಕ ಕ್ಷೇತ್ರ, ಮಂಗಳೂರು ಹೊರವಲಯದ ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಸ್ಥಳಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ, ತನ್ನ ಮಗನ ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಉಳ್ಳಾಲ, ಜ.16: ಕರಾವಳಿಯ ಕಾರಣಿಕ ಕ್ಷೇತ್ರ, ಮಂಗಳೂರು ಹೊರವಲಯದ ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಸ್ಥಳಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ, ತನ್ನ ಮಗನ ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಯಾರು ಬಂದರೂ ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ, ಮಗಳು, ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿ ಬರಲು ಬಹಳ ಆಸೆ ಇತ್ತು, ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಬಾರ್ಡರ್ -2 ಚಿತ್ರ ಬಿಡುಗಡೆಯಾಗುತ್ತಿದೆ. ಅದರ ಯಶಸ್ಸಿಗಾಗಿ ಆಶೀರ್ವಾದ ಬೇಡಲು ಇಲ್ಲಿಗೆ ಬಂದಿದ್ದೇನೆ ಎಂದರು. 

ತುಳು ಭಾಷೆ, ಸಂಸ್ಕೃತಿಯನ್ನು ಜಗತ್ತಿಗೆ ಪಸರಿಸುವ ಉದ್ದೇಶದಿಂದ ಈಗಾಗಲೇ "ಜೈ" ತುಳು  ಸಿನಿಮಾದಲ್ಲಿ ನಟಿಸಿದ್ದೇನೆ. ತುಳು, ಕನ್ನಡ ಸಿನೆಮಾದಲ್ಲಿ ಸದ್ಯಕ್ಕೆ ಬೇರೆ ಯೋಜನೆಗಳಿಲ್ಲ ಎಂದರು.‌ ಕುತ್ತಾರು ಕೊರಗತನಿಯ ಆದಿಸ್ಥಳ ಕ್ಷೇತ್ರದ ಪರವಾಗಿ ನಟ ಸುನಿಲ್ ಶೆಟ್ಟಿ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು.

ಮುಂಬೈ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು, ಕುತ್ತಾರು ಕೊರಗತನಿಯ ಆದಿಕ್ಷೇತ್ರದ ಮಹಾಬಲ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಶ್ರೀರಾಮ್ ರೈ ಮೊದಲಾದವರು ಉಪಸ್ಥಿತರಿದ್ದರು.

Bollywood actor Suniel Shetty visited the revered Koragajja Adi Shrine at Kuthar near Mangaluru and offered prayers seeking the success of his son Ahan Shetty’s upcoming film Border-2. Calling Koragajja a powerful divine force of the coastal region, Shetty said it was a long-cherished wish to visit the shrine, where he was later felicitated by temple authorities.