ಬ್ರೇಕಿಂಗ್ ನ್ಯೂಸ್
31-12-20 03:37 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ಅಧಿಕಾರಿಗಳ ಸಮನ್ವಯ ಕೊರತೆ, ಸಿಬಂದಿ ಕಡಿಮೆ ಇದ್ದುದು, ಮೇಲಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಗಳ ಮತ ಎಣಿಕೆ ಕಾರ್ಯ ಬುಧವಾರ ರಾತ್ರಿ ಇಡೀ ನಡೆದಿದ್ದು ಗೊಂದಲದ ಗೂಡಾಗಿತ್ತು. ಮತ ಎಣಿಕೆ ಕೇಂದ್ರದ ಅವ್ಯವಸ್ಥೆ ಬಗ್ಗೆ ಅಭ್ಯರ್ಥಿಗಳು, ಏಜೆಂಟರು ದೂರು ಹೇಳಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಅತಿ ಹೆಚ್ಚು ಗ್ರಾಮ ಪಂಚಾಯತಿಗಳಿದ್ದು ಮತ ಎಣಿಕೆ ಕಾರ್ಯವನ್ನು ಬಿ.ಸಿ.ರೋಡ್ ಕೈಕಂಬ ಸಮೀಪದ ಇನ್ಫೆಂಟ್ ಜೀಸಸ್ ಕಾಲೇಜಿನಲ್ಲಿ ನಡೆಸಲಾಗಿತ್ತು. ಅತೀ ಹೆಚ್ಚು ಗ್ರಾಮ ಪಂಚಾಯತ್ ಗಳನ್ನು ಹೊಂದಿದ್ದರೂ, ಬಂಟ್ವಾಳ ತಾಲೂಕಿನಲ್ಲಿ ಮತ ಎಣಿಕೆ ಕಾರ್ಯವನ್ನು ಎರಡು ಕಡೆ ಮಾಡುವ ಬದಲು ಒಂದೇ ಕಡೆ ಮಾಡಿದ್ದು ಎಡವಟ್ಟಿಗೆ ಕಾರಣವಾಗಿತ್ತು.
ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಬುಧವಾರ ರಾತ್ರಿಯ ವೇಳೆಗೆ ಮತ ಎಣಿಕೆ ಕಾರ್ಯಗಳು ಮುಗಿದಿದ್ದರೆ ಬಂಟ್ವಾಳ ತಾಲೂಕಿನ ಎಣಿಕಾ ಕಾರ್ಯ ಮುಗಿದಾಗ ಬೆಳಗ್ಗೆ ಐದು ಗಂಟೆ ಆಗಿತ್ತು. ಮತ ಎಣಿಕೆಗೆ ಸೂಕ್ತ ವ್ಯವಸ್ಥೆ ಮಾಡದ ಕಾರಣ ಇಡೀ ಪ್ರಕ್ರಿಯೆ ಕುಂಟುತ್ತಾ ಸಾಗಿತ್ತು.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಜೊತೆಗೆ ಏಜಂಟರು, ಪೊಲೀಸರು, ಅಧಿಕಾರಿಗಳು, ಸಿಬ್ಬಂದಿ ವರ್ಗ, ಮಾಧ್ಯಮದವರು ಬುಧವಾರ ಬೆಳಗ್ಗೆ ಬಂದವರು ರಾತ್ರಿ ಇಡೀ ನಿದ್ದೆ ಬಿಟ್ಟು ಗುರುವಾರ ಮುಂಜಾನೆ ವರೆಗೂ ಕೆಲಸದಲ್ಲಿ ತೊಡಗಿದ್ದರು. ಒಟ್ಟು ಮೂರು ಸುತ್ತಿನಲ್ಲಿ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸಬೇಕಿತ್ತು. ಅದರಂತೆ ಮೊದಲ ಸುತ್ತಿನ ಮತ ಎಣಿಕೆ ಬೆಳಗ್ಗೆ 8ರಿಂದ 10:15 ಎಂದು ತಿಳಿಸಲಾಗಿತ್ತು. ಆದರೆ ಮೊದಲ ಹಂತದ ಬಹುತೇಕ ಗ್ರಾಮ ಪಂಚಾಯತ್ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಅಪರಾಹ್ನ 3 ಗಂಟೆಯ ಬಳಿಕ. ಸಜಿಪನಡು ಸಹಿತ ಕೆಲವು ಗ್ರಾಮಗಳ ಮೊದಲ ಹಂತದ ಮತ ಎಣಿಕೆ ಸಂಜೆ 6 ಗಂಟೆಯ ವರೆಗೂ ನಡೆದಿತ್ತು. ಬಳಿಕ ಆರಂಭಗೊಂಡ ಎರಡು ಮತ್ತು ಮೂರನೇ ಹಂತದ ಮತ ಎಣಿಕೆ ಪ್ರಕ್ರಿಯೆ ಮುಂಜಾನೆ ವರೆಗೂ ನಡೆಯಿತು.

ಊಟ, ತಿಂಡಿ, ನೀರು ಇಲ್ಲದೆ ಪರದಾಟ !!
ಬುಧವಾರ ಮುಂಜಾನೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿ ವರ್ಗ, ಪೊಲೀಸರಿಗೆ ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ ದೊರಕ್ಕಿತ್ತು. ಆನಂತರ ಊಟ, ತಿಂಡಿ ಪೂರೈಕೆ ಆಗಿಲ್ಲ. ಇದರಿಂದ ಸಿಬಂದಿ ಅತ್ತ ಬಿಡಲೂ ಆಗದೆ, ಮುಗಿಸಲೂ ಆಗದೆ ಸಂಕಷ್ಟ ಅನುಭವಿಸಿದರು. ಬುಧವಾರ ಸಂಜೆಯ ವೇಳೆಗೆ ಕುಡಿಯುವ ನೀರು ಕೂಡ ಖಾಲಿ ಆಗಿತ್ತು. ಆ ಬಳಿಕ ಕುಡಿಯಲು ತೊಟ್ಟು ನೀರಿಗಾಗಿ ಸಿಬ್ಬಂದಿ ವರ್ಗ, ಪೊಲೀಸರು ಹಾಗೂ ಅಭ್ಯರ್ಥಿಗಳು, ಏಜೆಂಟರು ಪರದಾಡುವ ಸ್ಥಿತಿ ಎದುರಾಗಿತ್ತು.
ಬುಧವಾರ ಬೆಳಗ್ಗೆ ಮತ ಎಣಿಕೆ ಕೇಂದ್ರದ ಗೇಟ್ ಒಳಗೆ ಹೋಗಿದ್ದ ಬಹುತೇಕ ಅಭ್ಯರ್ಥಿಗಳು, ಏಜೆಂಟರು ಸಂಜೆ 6 ಗಂಟೆಯ ಬಳಿಕ ಹೊರ ಹೋಗಿದ್ದರು. ಅಧಿಕಾರಿಗಳು, ಸಿಬ್ಬಂದಿ, ಪೊಲೀಸರು, ಮಾಧ್ಯಮದವರಿಗೆ ಮಧ್ಯಾಹ್ನದ ಊಟ, ತಿಂಡಿಯ ವ್ಯವಸ್ಥೆ ಮಾಡಲಾಗಿತ್ತು. ಆದರೆ ಅಭ್ಯರ್ಥಿಗಳು ಮತ್ತು ಏಜೆಂಟರಿಗೆ ಊಟ ತಿಂಡಿಯ ವ್ಯವಸ್ಥೆ ಇರಲಿಲ್ಲ. ಅಲ್ಲದೆ ಕೂಪನ್ ಇದ್ದವರಿಗೆ ಮಾತ್ರ ಊಟ, ತಿಂಡಿ ನೀಡಲಾಗುತ್ತಿತ್ತು. ಇದರಿಂದಾಗಿ ಅಭ್ಯರ್ಥಿಗಳು ಮತ್ತು ಏಜೆಂಟರು ಬೆಳಗ್ಗೆಯಿಂದ ರಾತ್ರಿ ವರೆಗೂ ಊಟ, ತಿಂಡಿ ಇಲ್ಲದೆ ತೀವ್ರ ಸಂಕಷ್ಟ ಎದುರಿಸಿದರು.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm