ಬ್ರೇಕಿಂಗ್ ನ್ಯೂಸ್
21-01-26 10:55 pm Mangalore Correspondent ಕರಾವಳಿ
ಪುತ್ತೂರು, ಜ.21 : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡಿದ್ದಾರೆಂದು ಮಾನವ ಬಂಧುತ್ವ ವೇದಿಕೆಯ ರಾಮಚಂದ್ರ ಕೆ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಜ.12ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುದ್ವೇಷದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ. ಸದ್ರಿ ಭಾಷಣವನ್ನು "VIKASANA TV" ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿರುತ್ತಾರೆ. ಸದ್ರಿ ಕಾರ್ಯಕ್ರಮದಲ್ಲಿ ಹಿಂದು - ಮುಸ್ಲಿಂ ಮಧ್ಯೆ ಕೋಮು ದ್ವೇಷ ಬಿತ್ತುವ ರೀತಿ ಮಾತನಾಡಿದ್ದಾರೆ.
ಅಲ್ಲದೆ, ಮುಸ್ಲಿಂ ಮತ್ತು ಕ್ರಿಸ್ತಿಯನ್ ಮತಾಂತರ, ದೇಶ ವಿಭಜನೆ ಬಗ್ಗೆ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ್ದಾರೆಂದು ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ದ, ಸದ್ರಿ ಭಾಷಣವನ್ನು ಪ್ರಸಾರ ಮಾಡಿದ "VIKASANA TV" (ವಿಕಸನ ಟಿವಿ)ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಪುತ್ತೂರು ಠಾಣೆಯಲ್ಲಿ ಕೋಮು ದ್ವೇಷದ ಭಾಷಣ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದರಲ್ಲಿ ಜಾಮೀನು ಸಿಗಲು ಎರಡು ತಿಂಗಳು ಬೇಕಾಗಿತ್ತು. ಕೊನೆಗೆ, ಜಾಮೀನು ನೀಡುವ ಸಂದರ್ಭದಲ್ಲಿ ಇಂತಹ ಭಾಷಣ ಮಾಡಬಾರದು, ಕೇಸು ದಾಖಲಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತ್ತು.
Another FIR has been registered against RSS leader Dr. Kalladka Prabhakar Bhat for allegedly delivering a hate speech during a Vivekananda Jayanti programme held at Vivekananda College, Puttur, on January 12.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm