ಬ್ರೇಕಿಂಗ್ ನ್ಯೂಸ್
31-12-20 08:07 pm Mangaluru Correspondent ಕರಾವಳಿ
Photo credits : Facebook
ಮಂಗಳೂರು, ಡಿ.31: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ವಿಕಾಶ್ ಕುಮಾರ್ ಅವರನ್ನು ಕೆಎಸ್ ಆರ್ ಪಿ ಡಿಐಜಿ ಆಗಿ ವರ್ಗ ಮಾಡಿದ್ದು ನೂತನ್ ಪೊಲೀಸ್ ಕಮಿಷನರ್ ಆಗಿ ಎನ್. ಶಶಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಶಶಿಕುಮಾರ್ ಬೆಂಗಳೂರು ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದರು.
ಕಳೆದ ಜೂನ್ 29ರಂದು ವಿಕಾಶ್ ಕುಮಾರ್ ಮಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಕೇವಲ ಆರು ತಿಂಗಳಲ್ಲಿ ಕಮಿಷನರ್ ಹುದ್ದೆಯಿಂದ ತೆರವು ಮಾಡಿದ್ದು ಸಂಶಯಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಕಮಿಷನರ್ ಆಗಿದ್ದವರನ್ನು ಒಂದು ವರ್ಷಗಳ ಕಾಲ ವರ್ಗ ಮಾಡುವುದಿಲ್ಲ.

ಇದಕ್ಕೂ ಮುನ್ನ ಪಿ.ಎಸ್.ಹರ್ಷ ಮಂಗಳೂರು ಕಮಿಷನರ್ ಆಗಿದ್ದರು. ಕಳೆದ ಬಾರಿ ಗೋಲಿಬಾರ್ ಸಂದರ್ಭ ಹರ್ಷ ವಿರುದ್ಧ ಆರೋಪ ಕೇಳಿಬಂದರೂ, ಅವರನ್ನು ಉಳಿಸಿಕೊಳ್ಳಲಾಗಿತ್ತು. ಮೃದು ಸ್ವಭಾವದವರಾಗಿದ್ದ ಹರ್ಷ ಅವರ ಬಗ್ಗೆ ಮಂಗಳೂರಿನ ಪೊಲೀಸರಲ್ಲಿ ಉತ್ತಮ ಅಭಿಪ್ರಾಯವೇ ಇತ್ತು.
ಆದರೆ, ವಿಕಾಶ್ ಕುಮಾರ್ ಕಮಿಷನರ್ ಆಗಿ ಬಂದ ಬಳಿಕ ಸಹೋದ್ಯೋಗಿಗಳಲ್ಲಿಯೇ ಉತ್ತಮ ಅಭಿಪ್ರಾಯ ಇರಲಿಲ್ಲ. ಕೆಲವು ವಿಚಾರಗಳಲ್ಲಿ ಏಕಪಕ್ಷೀಯ ನಡೆ ತೋರುತ್ತಿದ್ದರೆಂದು ಆರೋಪಗಳಿದ್ದವು. ಹೊಯ್ಗೆ ಮಾಫಿಯಾ ದಲ್ಲಾಳಿಗಳು ಕಮಿಷನರ್ ಕಚೇರಿಗೇ ಬರುತ್ತಿದ್ದರೆಂಬ ಆರೋಪಗಳೂ ಇದ್ದವು. ಅಲ್ಲದೆ, ಯಾವುದೇ ಮಹತ್ವದ ಘಟನೆಗಳಾದ ಸಂದರ್ಭದಲ್ಲೂ ಕಮಿಷನರ್ ಸ್ಥಳಕ್ಕೆ ಬಂದು ಇತರೇ ಪೊಲೀಸರಿಗೆ ಮೋಟಿವೇಶನ್ ಕೊಡುವ ಕೆಲಸ ಮಾಡುತ್ತಿರಲಿಲ್ಲ. ಇದೇ ಕಾರಣಕ್ಕೋ ಏನೋ ಕೇವಲ ಆರೇ ತಿಂಗಳಲ್ಲಿ ಮಂಗಳೂರು ಕಮಿಷನರ್ ಮಹತ್ವದ ಹುದ್ದೆಯಿಂದ ತೆರವು ಮಾಡಲಾಗಿದ್ದು ಯಾವುದೇ ಮಹತ್ವ ಇರದ ಕೆಎಸ್ ಆರ್ ಪಿ ಡಿಐಜಿ ಆಗಿ ವರ್ಗ ಮಾಡಲಾಗಿದೆ. ಈ ಹುದ್ದೆಯನ್ನು ಡಿಮೋಶನ್ ಎಂದೇ ಪರಿಗಣಿಸಲಾಗುತ್ತದೆ.
ಇದೇ ವೇಳೆ, ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿಯಾಗಿ ಕರ್ತವ್ಯದಲ್ಲಿದ್ದ ಐಪಿಎಸ್ ಅಧಿಕಾರಿ ರಂಜಿತ್ ಕುಮಾರ್ ಬಂದಾರು ಅವರನ್ನು ಭಟ್ಕಳ ಉಪ ವಿಭಾಗದ ಎಸ್ಪಿ ಆಗಿ ಪ್ರಮೋಟ್ ಮಾಡಲಾಗಿದೆ.
Mangaluru city commissioner Vikash Kumar Vikash has been transferred with immediate effect. Shashi Kumar appointed as New Police Commissioner of Mangalore City. Shashi Kumar who was earlier the superintendent of police, internal security division will now assume th
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am