ಬ್ರೇಕಿಂಗ್ ನ್ಯೂಸ್
31-12-20 08:07 pm Mangaluru Correspondent ಕರಾವಳಿ
Photo credits : Facebook
ಮಂಗಳೂರು, ಡಿ.31: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ವಿಕಾಶ್ ಕುಮಾರ್ ಅವರನ್ನು ಕೆಎಸ್ ಆರ್ ಪಿ ಡಿಐಜಿ ಆಗಿ ವರ್ಗ ಮಾಡಿದ್ದು ನೂತನ್ ಪೊಲೀಸ್ ಕಮಿಷನರ್ ಆಗಿ ಎನ್. ಶಶಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಶಶಿಕುಮಾರ್ ಬೆಂಗಳೂರು ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದರು.
ಕಳೆದ ಜೂನ್ 29ರಂದು ವಿಕಾಶ್ ಕುಮಾರ್ ಮಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಕೇವಲ ಆರು ತಿಂಗಳಲ್ಲಿ ಕಮಿಷನರ್ ಹುದ್ದೆಯಿಂದ ತೆರವು ಮಾಡಿದ್ದು ಸಂಶಯಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಕಮಿಷನರ್ ಆಗಿದ್ದವರನ್ನು ಒಂದು ವರ್ಷಗಳ ಕಾಲ ವರ್ಗ ಮಾಡುವುದಿಲ್ಲ.

ಇದಕ್ಕೂ ಮುನ್ನ ಪಿ.ಎಸ್.ಹರ್ಷ ಮಂಗಳೂರು ಕಮಿಷನರ್ ಆಗಿದ್ದರು. ಕಳೆದ ಬಾರಿ ಗೋಲಿಬಾರ್ ಸಂದರ್ಭ ಹರ್ಷ ವಿರುದ್ಧ ಆರೋಪ ಕೇಳಿಬಂದರೂ, ಅವರನ್ನು ಉಳಿಸಿಕೊಳ್ಳಲಾಗಿತ್ತು. ಮೃದು ಸ್ವಭಾವದವರಾಗಿದ್ದ ಹರ್ಷ ಅವರ ಬಗ್ಗೆ ಮಂಗಳೂರಿನ ಪೊಲೀಸರಲ್ಲಿ ಉತ್ತಮ ಅಭಿಪ್ರಾಯವೇ ಇತ್ತು.
ಆದರೆ, ವಿಕಾಶ್ ಕುಮಾರ್ ಕಮಿಷನರ್ ಆಗಿ ಬಂದ ಬಳಿಕ ಸಹೋದ್ಯೋಗಿಗಳಲ್ಲಿಯೇ ಉತ್ತಮ ಅಭಿಪ್ರಾಯ ಇರಲಿಲ್ಲ. ಕೆಲವು ವಿಚಾರಗಳಲ್ಲಿ ಏಕಪಕ್ಷೀಯ ನಡೆ ತೋರುತ್ತಿದ್ದರೆಂದು ಆರೋಪಗಳಿದ್ದವು. ಹೊಯ್ಗೆ ಮಾಫಿಯಾ ದಲ್ಲಾಳಿಗಳು ಕಮಿಷನರ್ ಕಚೇರಿಗೇ ಬರುತ್ತಿದ್ದರೆಂಬ ಆರೋಪಗಳೂ ಇದ್ದವು. ಅಲ್ಲದೆ, ಯಾವುದೇ ಮಹತ್ವದ ಘಟನೆಗಳಾದ ಸಂದರ್ಭದಲ್ಲೂ ಕಮಿಷನರ್ ಸ್ಥಳಕ್ಕೆ ಬಂದು ಇತರೇ ಪೊಲೀಸರಿಗೆ ಮೋಟಿವೇಶನ್ ಕೊಡುವ ಕೆಲಸ ಮಾಡುತ್ತಿರಲಿಲ್ಲ. ಇದೇ ಕಾರಣಕ್ಕೋ ಏನೋ ಕೇವಲ ಆರೇ ತಿಂಗಳಲ್ಲಿ ಮಂಗಳೂರು ಕಮಿಷನರ್ ಮಹತ್ವದ ಹುದ್ದೆಯಿಂದ ತೆರವು ಮಾಡಲಾಗಿದ್ದು ಯಾವುದೇ ಮಹತ್ವ ಇರದ ಕೆಎಸ್ ಆರ್ ಪಿ ಡಿಐಜಿ ಆಗಿ ವರ್ಗ ಮಾಡಲಾಗಿದೆ. ಈ ಹುದ್ದೆಯನ್ನು ಡಿಮೋಶನ್ ಎಂದೇ ಪರಿಗಣಿಸಲಾಗುತ್ತದೆ.
ಇದೇ ವೇಳೆ, ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿಯಾಗಿ ಕರ್ತವ್ಯದಲ್ಲಿದ್ದ ಐಪಿಎಸ್ ಅಧಿಕಾರಿ ರಂಜಿತ್ ಕುಮಾರ್ ಬಂದಾರು ಅವರನ್ನು ಭಟ್ಕಳ ಉಪ ವಿಭಾಗದ ಎಸ್ಪಿ ಆಗಿ ಪ್ರಮೋಟ್ ಮಾಡಲಾಗಿದೆ.
Mangaluru city commissioner Vikash Kumar Vikash has been transferred with immediate effect. Shashi Kumar appointed as New Police Commissioner of Mangalore City. Shashi Kumar who was earlier the superintendent of police, internal security division will now assume th
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am