ಬ್ರೇಕಿಂಗ್ ನ್ಯೂಸ್
29-01-26 10:38 pm Mangalore Correspondent ಕರಾವಳಿ
ಮಂಗಳೂರು, ಜ.29 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಧ್ವನಿ ಎತ್ತಿದರು.
ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು ಲೊಕೇಶನ್ ಸೆರೆಹಿಡಿದು ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತಿತ್ತು. ಈ ಸರ್ಕಾರ ಯಾವಾಗ ಹೊಸ ತಂತ್ರಾಂಶವನ್ನು ಜಾರಿಗೊಳಿಸಿತೋ ಅಂದಿನಿಂದ ಎಲ್ಲವೂ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಎರಡು ತಿಂಗಳಿನಲ್ಲಿ ಆಗಿರುವ ಇ-ಖಾತಾಗಳ ಸಂಖ್ಯೆ ನೋಡಿದರೆ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ ಸಚಿವರು ಮಾತ್ರ, ಸರ್ವರ್ ಉನ್ನತೀಕರಿಸಲಾಗಿದ್ದು ಯಾವುದೇ ಸಮಸ್ಯೆಯಿಲ್ಲವೆಂದು ಉತ್ತರಿಸಿರುವುದು ದುರಂತವೆಂದರು.
ಅಲ್ಲದೇ ನಗರದಲ್ಲಿ ಪಿಪಿಪಿ ಮಾಡಲ್ ನಲ್ಲಿ ಅಳವಡಿಸಲಾಗಿರುವ ಬೀದಿ ದೀಪಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ. ಹಳೆಯ ದೀಪಗಳು ದುರಸ್ತಿಯಾಗುತ್ತಿಲ್ಲ, ಹೊಸ ದೀಪಗಳು ಅಳವಡಿಸುತ್ತಿಲ್ಲ. ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಬಳಿ ಒಳಚರಂಡಿ ಕಾಮಗಾರಿ ಅಸ್ತವ್ಯಸ್ತಗೊಂಡಿರುವ ಬಗ್ಗೆ ಸ್ಥಳೀಯ ಮಹಿಳೆಯರು ದೂರು ನೀಡುತ್ತಿದ್ದಾರೆ. ಅದು ಸಚಿವರ ಸಹಿತ ಸ್ಪೀಕರ್ ಅವರ ಗಮನಕ್ಕೂ ಬಂದಿದೆ. ನಗರದ ಪ್ರಮುಖ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜಲಸಿರಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ. ಇಂತಹ ಮೊದಲಾದ ಸಮಸ್ಯೆಗಳ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಬೇಕು ಎಂದರು.
MLA Vedavyas Kamath highlighted serious e-Khata issues in Mangaluru City Corporation limits, along with damaged roads, faulty streetlights, drainage problems and delayed projects, urging the state government to take immediate corrective action.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm