ಬ್ರೇಕಿಂಗ್ ನ್ಯೂಸ್
01-02-26 07:52 pm Mangalore Correspondent ಕರಾವಳಿ
ಮಂಗಳೂರು, ಫೆ.1: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡೀಪಾರು ಮಾಡಿ ಆದೇಶಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಕ್ಕೆ ಹೈಕೋರ್ಟ್ ಮತ್ತೊಮ್ಮೆ ತಡೆಯಾಜ್ಞೆ ವಿಧಿಸಿದ್ದು, ವಿವೇಚನೆ ಬಳಸಿ ಮರು ಆದೇಶ ನೀಡುವಂತೆ ಮತ್ತೆ ಸೂಚಿಸಿದೆ.
ಈ ಹಿಂದೆಯೂ ಮಹೇಶ್ ಶೆಟ್ಟಿ ಗಡಿಪಾರಿಗೆ ಪುತ್ತೂರು ವಿಭಾಗಾಧಿಕಾರಿ ಆದೇಶ ನೀಡಿದ್ದರೂ ಹೈಕೋರ್ಟ್ ತಡೆ ಹಾಕಿ ಸರಿಯಾದ ಆದೇಶ ನೀಡಿ ಎಂದು ಎರಡು ತಿಂಗಳ ಹಿಂದೆ ಹೇಳಿತ್ತು. ಆನಂತರ, ಮತ್ತೊಮ್ಮೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ನೀಡಿದ್ದರು. ಆದರೆ ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ವಾದ ಆಲಿಸಿದ ಬಳಿಕ ಮತ್ತೆ ತಡೆ ಹಾಕಲಾಗಿದ್ದು ಎಸಿ ಸ್ಟೆಲ್ಲಾ ವರ್ಗೀಸ್ ಮುಖಭಂಗ ಅನುಭವಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂಬತ್ತು ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಿದ್ದ ಆದೇಶವನ್ನು ಶನಿವಾರ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದೆ. ಇದೇ ವೇಳೆ, ಗಡಿಪಾರು ವಿಚಾರದಲ್ಲಿ ವಿವೇಚನೆ ಬಳಸಿ ಮೂರು ವಾರಗಳಲ್ಲಿ ಹೊಸದಾಗಿ ಆದೇಶ ಮಾಡುವಂತೆ ಉಪ ವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ. ಉಪ ವಿಭಾಗಾಧಿಕಾರಿ ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.
ಉಪ ವಿಭಾಗಾಧಿಕಾರಿ ಮಹೇಶ್ ತಿಮರೋಡಿಗೆ ನೀಡಿರುವ ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಿರುವ ಬಹುತೇಕ ಪ್ರಕರಣಗಳಲ್ಲಿ ತಿಮರೋಡಿ ಖುಲಾಸೆಯಾಗಿದ್ದಾರೆ. ಈ ವಿಚಾರವನ್ನು ಆಕ್ಷೇಪಣೆಯ ಮೂಲಕ ಉಪ ವಿಭಾಗಾಧಿಕಾರಿ ಗಮನಕ್ಕೆ ತರಲಾಗಿದೆ. ಇದನ್ನು ಪರಿಗಣಿಸದೇ ಉಪ ವಿಭಾಗಾಧಿಕಾರಿ ಗಡಿಪಾರು ಆದೇಶ ಮಾಡಿದ್ದಾರೆ. ಇದನ್ನು ರಿಟ್ ಅರ್ಜಿಯ ಮೂಲಕ ಪ್ರಶ್ನಿಸಲಾಗಿದೆ. ವಿವೇಚನೆ ಬಳಸಿ, ಸೂಕ್ತ ಆದೇಶ ಹೊರಡಿಸುವಂತೆ ಈ ಹಿಂದೆ ಸಕ್ಷಮ ನ್ಯಾಯಾಲಯ ಆದೇಶಿಸಿತ್ತು. ಅದಕ್ಕೆ ಅನುಗುಣವಾಗಿ, ತಿಮರೋಡಿಯ ಆಕ್ಷೇಪಣೆಯನ್ನು ಪರಿಗಣಿಸಿ, ವಿವೇಚನೆ ಬಳಸಿ, ಸೂಕ್ತ ಆದೇಶವನ್ನು ಹೊಸದಾಗಿ ಮೂರು ವಾರಗಳಲ್ಲಿ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿ ನ್ಯಾಯಾಲಯವು ಅರ್ಜಿಯನ್ನು ಇತ್ಯರ್ಥಪಡಿಸಿದೆ.
The Karnataka High Court has once again stayed the externment order issued against activist Mahesh Shetty Timarodi by the Puttur Sub-Divisional Officer (SDO), directing the authority to reconsider the matter and pass a fresh order within three weeks.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am