ಬ್ರೇಕಿಂಗ್ ನ್ಯೂಸ್
01-02-26 07:52 pm Mangalore Correspondent ಕರಾವಳಿ
ಮಂಗಳೂರು, ಫೆ.1: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡೀಪಾರು ಮಾಡಿ ಆದೇಶಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಕ್ಕೆ ಹೈಕೋರ್ಟ್ ಮತ್ತೊಮ್ಮೆ ತಡೆಯಾಜ್ಞೆ ವಿಧಿಸಿದ್ದು, ವಿವೇಚನೆ ಬಳಸಿ ಮರು ಆದೇಶ ನೀಡುವಂತೆ ಮತ್ತೆ ಸೂಚಿಸಿದೆ.
ಈ ಹಿಂದೆಯೂ ಮಹೇಶ್ ಶೆಟ್ಟಿ ಗಡಿಪಾರಿಗೆ ಪುತ್ತೂರು ವಿಭಾಗಾಧಿಕಾರಿ ಆದೇಶ ನೀಡಿದ್ದರೂ ಹೈಕೋರ್ಟ್ ತಡೆ ಹಾಕಿ ಸರಿಯಾದ ಆದೇಶ ನೀಡಿ ಎಂದು ಎರಡು ತಿಂಗಳ ಹಿಂದೆ ಹೇಳಿತ್ತು. ಆನಂತರ, ಮತ್ತೊಮ್ಮೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ನೀಡಿದ್ದರು. ಆದರೆ ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ವಾದ ಆಲಿಸಿದ ಬಳಿಕ ಮತ್ತೆ ತಡೆ ಹಾಕಲಾಗಿದ್ದು ಎಸಿ ಸ್ಟೆಲ್ಲಾ ವರ್ಗೀಸ್ ಮುಖಭಂಗ ಅನುಭವಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂಬತ್ತು ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಿದ್ದ ಆದೇಶವನ್ನು ಶನಿವಾರ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದೆ. ಇದೇ ವೇಳೆ, ಗಡಿಪಾರು ವಿಚಾರದಲ್ಲಿ ವಿವೇಚನೆ ಬಳಸಿ ಮೂರು ವಾರಗಳಲ್ಲಿ ಹೊಸದಾಗಿ ಆದೇಶ ಮಾಡುವಂತೆ ಉಪ ವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ. ಉಪ ವಿಭಾಗಾಧಿಕಾರಿ ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.
ಉಪ ವಿಭಾಗಾಧಿಕಾರಿ ಮಹೇಶ್ ತಿಮರೋಡಿಗೆ ನೀಡಿರುವ ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಿರುವ ಬಹುತೇಕ ಪ್ರಕರಣಗಳಲ್ಲಿ ತಿಮರೋಡಿ ಖುಲಾಸೆಯಾಗಿದ್ದಾರೆ. ಈ ವಿಚಾರವನ್ನು ಆಕ್ಷೇಪಣೆಯ ಮೂಲಕ ಉಪ ವಿಭಾಗಾಧಿಕಾರಿ ಗಮನಕ್ಕೆ ತರಲಾಗಿದೆ. ಇದನ್ನು ಪರಿಗಣಿಸದೇ ಉಪ ವಿಭಾಗಾಧಿಕಾರಿ ಗಡಿಪಾರು ಆದೇಶ ಮಾಡಿದ್ದಾರೆ. ಇದನ್ನು ರಿಟ್ ಅರ್ಜಿಯ ಮೂಲಕ ಪ್ರಶ್ನಿಸಲಾಗಿದೆ. ವಿವೇಚನೆ ಬಳಸಿ, ಸೂಕ್ತ ಆದೇಶ ಹೊರಡಿಸುವಂತೆ ಈ ಹಿಂದೆ ಸಕ್ಷಮ ನ್ಯಾಯಾಲಯ ಆದೇಶಿಸಿತ್ತು. ಅದಕ್ಕೆ ಅನುಗುಣವಾಗಿ, ತಿಮರೋಡಿಯ ಆಕ್ಷೇಪಣೆಯನ್ನು ಪರಿಗಣಿಸಿ, ವಿವೇಚನೆ ಬಳಸಿ, ಸೂಕ್ತ ಆದೇಶವನ್ನು ಹೊಸದಾಗಿ ಮೂರು ವಾರಗಳಲ್ಲಿ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿ ನ್ಯಾಯಾಲಯವು ಅರ್ಜಿಯನ್ನು ಇತ್ಯರ್ಥಪಡಿಸಿದೆ.
The Karnataka High Court has once again stayed the externment order issued against activist Mahesh Shetty Timarodi by the Puttur Sub-Divisional Officer (SDO), directing the authority to reconsider the matter and pass a fresh order within three weeks.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am