ಬ್ರೇಕಿಂಗ್ ನ್ಯೂಸ್
02-02-26 05:09 pm Mangalore Correspondent ಕರಾವಳಿ
ಮಂಗಳೂರು, ಫೆ.2 : ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬಹುಪರಾಕ್ ನೀಡಿದ್ದಾರೆ. ಸುದ್ದಿಗೋಷ್ಟಿ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗೆ, ರಾಜ್ಯ ಬಿಜೆಪಿಯನ್ನು ವಿಜಯೇಂದ್ರ ಉತ್ತಮವಾಗಿ ಸಂಘಟಿಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಬಿಜೆಪಿ ಚಟುವಟಿಕೆ ಉತ್ತಮಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯಾಧ್ಯಕ್ಷರ ಬದಲಾವಣೆ ಅಂತ ಯಾರೋ ಕೆಲವರು ಹೇಳುತ್ತಿರುತ್ತಾರೆ. ಅದಕ್ಕೇನೂ ತಲೆಕೆಡಿಸಿಕೊಳ್ಳಬೇಕಿಲ್ಲ. ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಒಂದೇ ವಾರದಲ್ಲಿ ಬದಲಾವಣೆ ಆಗುತ್ತೆ ಎಂದು ನಿಮ್ಮ ಪತ್ರಿಕೆಯವರೇ ಬರೆಯತೊಡಗಿದ್ದರು. ಆನಂತರವೂ ಬದಲಾವಣೆ ಸುದ್ದಿ ಬರ್ತಾನೇ ಇತ್ತು. ಆದರೆ ನಾಲ್ಕು ವರ್ಷ, ನಾಲ್ಕು ತಿಂಗಳ ಕಾಲ ಅಧ್ಯಕ್ಷ ಸ್ಥಾನದಲ್ಲಿದ್ದೆ. ವಿಜಯೇಂದ್ರ ಅವರನ್ನು ನಮ್ಮ ರಾಷ್ಟ್ರೀಯ ನಾಯಕರು ನೇಮಕ ಮಾಡಿದ್ದಾರೆ, ನಾವೆಲ್ಲ ಒಪ್ಪಿಕೊಳ್ಳಲೇಬೇಕು. ಅವರು ಒಳ್ಳೆದಾಗಿಯೇ ಸಂಘಟನಾ ಚಟುವಟಿಕೆ ಮಾಡುತ್ತಿದ್ದಾರೆ. ಅದೇ ರೀತಿ ನಮ್ಮ ಇಲ್ಲಿನ ಸಂಸದರು ಕೂಡ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಹೊಸ ಹೊಸ ಯೋಜನೆಗಳನ್ನು ಜಿಲ್ಲೆಗೆ ತರುತ್ತಿದ್ದಾರೆ ಎಂದು ಹೇಳುವ ಮೂಲಕ ಮಂಗಳೂರಿನ ಹಾಲಿ ಸಂಸದ ಕ್ಯಾ.ಬ್ರಿಜೇಶ್ ಚೌಟರನ್ನೂ ನಳಿನ್ ಕುಮಾರ್ ಹೊಗಳಿದ್ದಾರೆ. ಆಮೂಲಕ ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಣದಿಂದ ದೂರವಿದ್ದ ನಳಿನ್ ಬಹಿರಂಗವಾಗಿಯೇ ಬೆಂಬಲ ನೀಡಿದಂತಾಗಿದೆ.
ಕೇಂದ್ರ ಬಜೆಟ್ ದೂರದೃಷ್ಟಿಯಿಂದ ಕೂಡಿದ್ದು, 2047ರ ವೇಳೆಗೆ ದೇಶವನ್ನು ಅಭಿವೃದ್ಧಿಯತ್ತ ಒಯ್ಯಲಿದೆ. ಕೃಷಿ, ಕೈಗಾರಿಕೆ, ಉತ್ಪಾದನೆ, ಮೂಲಸೌಕರ್ಯ, ರೈಲ್ವೇ ಹೀಗೆ ಎಲ್ಲ ಕ್ಷೇತ್ರಗಳಿಗೂ ಸಮಗ್ರ ರೀತಿಯ ಯೋಜನೆಗಳನ್ನು ಕೊಟ್ಟಿದ್ದಾರೆ ಎಂದು ಹೇಳಿದ ನಳಿನ್ ಕುಮಾರ್, ಬೆಂಗಳೂರು- ಚೆನ್ನೈ- ಪುಣೆ- ಮುಂಬೈ- ಹೈದ್ರಾಬಾದ್ ನಗರಗಳನ್ನು ಜೋಡಿಸಲು ಹೈಸ್ಪೀಡ್ ರೈಲು ಯೋಜನೆ ಪ್ರಕಟಿಸಿದ್ದು ದೊಡ್ಡ ಕೊಡುಗೆ. ಈ ಭಾಗದಲ್ಲಿ ಹೈಸ್ಪೀಡ್ ರೈಲು ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಹೇಳಿದರು.
ಹೈಸ್ಪೀಡ್ ರೈಲ್ವೇಯಲ್ಲಿ ರಾಜ್ಯದ ಪಾಲಿರುವುದಕ್ಕೆ ಡಿಸಿಎಂ ಡಿಕೆಶಿ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿದ ನಳಿನ್, ಕಾಂಗ್ರೆಸಿಗರು ಟೀಕೆ ಮಾಡುವುದನ್ನಷ್ಟೇ ಮಾಡುತ್ತಿದ್ದಾರೆ. ರೈಲ್ವೇಯ ಎಲ್ಲ ಯೋಜನೆಗಳಿಗೂ ರಾಜ್ಯ ಮತ್ತು ಕೇಂದ್ರದ ಪಾಲಿದೆ. ಇದನ್ನು ಮಲ್ಲಿಕಾರ್ಜುನ ಖರ್ಗೆ ರೈಲ್ವೇ ಸಚಿವರಾಗಿದ್ದಾಗಲೇ ಮಾಡಿರುವುದು. ಇದಕ್ಕೆ ಆಗ ಯಡಿಯೂರಪ್ಪ ಸಿಎಂ ಆಗಿದ್ದಾಗ ಬೆಂಬಲಿಸಿದ್ದರಿಂದ ರಾಜ್ಯದಲ್ಲಿ ರೈಲ್ವೇ ಅಭಿವೃದ್ಧಿ ಸಾಧ್ಯವಾಯಿತು. ಡಿಕೆಶಿ ಸಹಕಾರ ಕೊಡುವುದಿಲ್ಲ ಎಂದರೆ ರೈಲ್ವೇ ಕೆಲಸಗಳನ್ನು ಕುಂಠಿತ ಮಾಡಿದಂತೆ ಎಂದು ಟೀಕಿಸಿದರು.
ಬಜೆಟ್ ಶ್ವೇತಪತ್ರ ಹೊರಡಿಸಲಿ
ರಾಜ್ಯದಲ್ಲಿ ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿಯಾಗಲು ಕೇಂದ್ರ ಅನುದಾನ ಕಡಿಮೆಯಾಗಿರುವುದು ಕಾರಣ ಎಂಬ ಸಿದ್ದರಾಮಯ್ಯ ಟೀಕೆ ಕುರಿತ ಪ್ರಶ್ನೆಗೆ, ಸಿಎಂ ಸಿದ್ದರಾಮಯ್ಯನವರು ತಮ್ಮ ಬಜೆಟಿನ ಶ್ವೇತ ಪತ್ರವನ್ನು ಹೊರಡಿಸಲಿ. ರಾಜ್ಯದ ಹಣ ಎಲ್ಲೆಲ್ಲಿ ಪೋಲಾಗುತ್ತಿದೆ ಎನ್ನುವುದನ್ನು ತೋರಿಸುತ್ತೇವೆ. ಅತಿ ಹೆಚ್ಚು ಬಜೆಟ್ ಮಂಡಿಸಿರುವ ಸಿದ್ದರಾಮಯ್ಯರಿಗೆ ಹಣಕಾಸಿನ ಸ್ಥಿತಿಗತಿ ತಿಳಿದಿಲ್ಲವೇ.. ಆದರೂ ಕೇಂದ್ರದ ಬಗ್ಗೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಜಿಎಸ್ಟಿ ಅನುದಾನ ಬಂದಿಲ್ಲ ಎನ್ನುವ ಇವರು, ಕಳೆದ ಬಾರಿ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಬಂದು ಸುದ್ದಿಗೋಷ್ಟಿ ಮಾಡಿದಾಗ ಪ್ರಶ್ನೆ ಮಾಡಬೇಕಿತ್ತು. ಜಿಎಸ್ಟಿ ಪಾಲು ಎಲ್ಲರಿಗೂ ಸಮಾನವಾಗಿಯೇ ಇರುತ್ತದೆ. ಅದರ ಬಗ್ಗೆ ಸಚಿವರು ಸ್ಪಷ್ಟನೆಯನ್ನೂ ನೀಡಿದ್ದರು ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ವಸಂತ ಪೂಜಾರಿ ಇದ್ದರು.
Former MP and ex-state BJP president Nalin Kumar Kateel has openly praised state BJP president B.Y. Vijayendra’s leadership, stating that the party is being effectively organized under him. He said criticism of party presidents is common and should not be taken seriously.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am