ಬ್ರೇಕಿಂಗ್ ನ್ಯೂಸ್
01-01-21 12:17 pm Mangalore Correspondent ಕರಾವಳಿ
ಮಂಗಳೂರು, ಜ.1: ಕೊರೊನಾ ಲಾಕ್ಡೌನ್ ಆಗಿ ಸುಮಾರು 10 ತಿಂಗಳ ಬಳಿಕ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳು ಕರಾವಳಿಯಲ್ಲಿ ಆರಂಭಗೊಂಡಿದೆ. 6ರಿಂದ 9ನೇ ತರಗತಿ ವರೆಗಿನ ಮಕ್ಕಳು ‘ವಿದ್ಯಾಗಮ-2’ ಕಾರ್ಯಕ್ರಮಕ್ಕಾಗಿ ಶಾಲೆಗಳಲ್ಲಿ ಹಾಜರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲೆ, ಕಾಲೇಜುಗಳಿಂದ ಹೊರಗೇ ಉಳಿದಿದ್ದ ವಿದ್ಯಾರ್ಥಿಗಳು 2021ರ ಹೊಸ ವರ್ಷದ ಮೊದಲ ದಿನದಿಂದ ಶಾಲೆ, ಕಾಲೇಜು ಆವರಣ ಪ್ರವೇಶಿಸಿದ್ದಾರೆ.

ಮಕ್ಕಳನ್ನು ಸ್ವಾಗತಿಸಲು ಕೆಲವು ದಿನಗಳ ಹಿಂದಿನಿಂದಲೇ ಶಾಲಾ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧತೆ ನಡೆಸಿದ್ದರು. ಕೆಲವು ಸರಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.

ತರಗತಿಗಳಿಗೆ ಹಾಗೂ ವಿದ್ಯಾಗಮಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಪಾಲಕರ ಅನುಮತಿ ಪತ್ರಗಳೊಂದಿಗೆ ಹಾಜರಾಗಬೇಕಿದೆ. ಅಲ್ಲದೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಪಡೆದೇ ಮಾತ್ರ ಶಾಲೆಗೆ ಆಗಮಿಸಿದ್ದಾರೆ.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಶಾಲಾ ಕೊಠಡಿಗಳು, ಶಾಲಾ ಆವರಣ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಪ್ರತಿದಿನ ಬೆಳಗ್ಗೆ 10ರಿಂದ 12.30ರ ವರೆಗೆ ನಡೆಯಲಿದೆ. 8 ಮತ್ತು 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರತಿದಿನ 10:ರಿಂದ ಮಧ್ಯಾಹ್ನ 1ರ ವರೆಗೆ ಇರುತ್ತದೆ.
The schools have reopened on Friday January 1 after having been closed for nine months because of corona fear. The schools have been spruced up to welcome the students back to schools.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm