ಬ್ರೇಕಿಂಗ್ ನ್ಯೂಸ್
01-01-21 12:17 pm Mangalore Correspondent ಕರಾವಳಿ
ಮಂಗಳೂರು, ಜ.1: ಕೊರೊನಾ ಲಾಕ್ಡೌನ್ ಆಗಿ ಸುಮಾರು 10 ತಿಂಗಳ ಬಳಿಕ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳು ಕರಾವಳಿಯಲ್ಲಿ ಆರಂಭಗೊಂಡಿದೆ. 6ರಿಂದ 9ನೇ ತರಗತಿ ವರೆಗಿನ ಮಕ್ಕಳು ‘ವಿದ್ಯಾಗಮ-2’ ಕಾರ್ಯಕ್ರಮಕ್ಕಾಗಿ ಶಾಲೆಗಳಲ್ಲಿ ಹಾಜರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲೆ, ಕಾಲೇಜುಗಳಿಂದ ಹೊರಗೇ ಉಳಿದಿದ್ದ ವಿದ್ಯಾರ್ಥಿಗಳು 2021ರ ಹೊಸ ವರ್ಷದ ಮೊದಲ ದಿನದಿಂದ ಶಾಲೆ, ಕಾಲೇಜು ಆವರಣ ಪ್ರವೇಶಿಸಿದ್ದಾರೆ.

ಮಕ್ಕಳನ್ನು ಸ್ವಾಗತಿಸಲು ಕೆಲವು ದಿನಗಳ ಹಿಂದಿನಿಂದಲೇ ಶಾಲಾ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧತೆ ನಡೆಸಿದ್ದರು. ಕೆಲವು ಸರಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.

ತರಗತಿಗಳಿಗೆ ಹಾಗೂ ವಿದ್ಯಾಗಮಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಪಾಲಕರ ಅನುಮತಿ ಪತ್ರಗಳೊಂದಿಗೆ ಹಾಜರಾಗಬೇಕಿದೆ. ಅಲ್ಲದೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಪಡೆದೇ ಮಾತ್ರ ಶಾಲೆಗೆ ಆಗಮಿಸಿದ್ದಾರೆ.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಶಾಲಾ ಕೊಠಡಿಗಳು, ಶಾಲಾ ಆವರಣ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಪ್ರತಿದಿನ ಬೆಳಗ್ಗೆ 10ರಿಂದ 12.30ರ ವರೆಗೆ ನಡೆಯಲಿದೆ. 8 ಮತ್ತು 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರತಿದಿನ 10:ರಿಂದ ಮಧ್ಯಾಹ್ನ 1ರ ವರೆಗೆ ಇರುತ್ತದೆ.
The schools have reopened on Friday January 1 after having been closed for nine months because of corona fear. The schools have been spruced up to welcome the students back to schools.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm