ಬ್ರೇಕಿಂಗ್ ನ್ಯೂಸ್
06-02-26 03:09 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಮುಂದಿನ ಐದು ವರ್ಷ ನನ್ನ ತಂದೆಯವರೇ ಸಿಎಂ ಆಗಿರುತ್ತಾರೆ, ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯದ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತೂರಿನಲ್ಲಿ ಕಾಂಗ್ರೆಸ್ ಕಚೇರಿ ಶಿಲಾನ್ಯಾಸಕ್ಕೆ ಆಗಮಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಏರ್ಪೋರ್ಟ್ ನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
"ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಏನ್ ಮಾತು ಹೇಳ್ತಾರೋ ಅದನ್ನ ಗೌರವದಿಂದ ಸ್ವೀಕಾರ ಮಾಡೋಣ.. ಹೈಕಮಾಂಡ್ ಹೇಳಿದ ಮೇಲೆ ನಾವು ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ ಎಂದು ತೀಕ್ಷ್ಣ ರೀತಿಯಲ್ಲಿ ಟಾಂಗ್ ನೀಡಿದ್ದಾರೆ. ಬಸವರಾಜು ಸೇರಿದಂತೆ ಈ ಬಗ್ಗೆ ಕೆಲವರು ಆಡಿರುವ ಮಾತಿನ ಬಗ್ಗೆ ಕೇಳಿದಾಗ, ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆನೂ ಕೊಡಲ್ಲ ಎಂದರು.
ಮಾರ್ಚ್ ವೇಳೆಗೆ ರಾಜ್ಯದಲ್ಲಿ ನೂರು ಕಾಂಗ್ರೆಸ್ ಕಚೇರಿ ಮಾಡ್ತೀವಿ, ಮಾರ್ಚ್ 10 ರಂದು ಶಿಲಾನ್ಯಾಸ ಮಾಡ್ತೀನಿ ಎಂದು ಡಿಕೆಶಿ ಹೇಳಿದರು. ಪುತ್ತೂರಿನ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡರನ್ನು ಆಹ್ವಾನಿಸಿಲ್ಲ ಎಂಬ ಜಾಲತಾಣದ ಟೀಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ಮೇಲೆ ಕಾಂಗ್ರೆಸ್ ರಾಜಕಾರಣ ಮಾಡೋದು. ನಮಗೆ ಎಲ್ಲಾ ಜಾತಿ ಧರ್ಮ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಮೂಲ ಸಿದ್ಧಾಂತ.
ನಾವು ಫ್ರೀಯಾಗಿ ಜಾಗ ಕೊಡಿಸುತ್ತೇವೆ, ಬೇಕಾದವರು ಕಾಂಗ್ರೆಸ್ ಕಚೇರಿ ಕಟ್ಟಿಕೊಳ್ಳಲಿ. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ. ಪುತ್ತೂರಿನ ಕಾರ್ಯಕ್ರಮಕ್ಕೆ ಇನಾಯತ್ ಅಲಿ ಸೇರಿದಂತೆ ಎಲ್ಲರನ್ನೂ ಕರೆದಿದ್ದೇವೆ. ಎಲ್ಲರೂ ಸೇರಿಯೇ ಕಾರ್ಯಕ್ರಮ ಮಾಡ್ತಿದೇವೆ ಎಂದು ಹೇಳಿದ್ದಾರೆ.
Deputy Chief Minister D.K. Shivakumar reacted sarcastically to remarks made by Yathindra Siddaramaiah, who had reportedly stated that his father would continue as Chief Minister for the next five years with the “green signal” from the party high command.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am