ಬ್ರೇಕಿಂಗ್ ನ್ಯೂಸ್
06-02-26 09:01 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಧರ್ಮಸ್ಥಳಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಲ್ಲಿ ನೀವು ಇದೇ ಶಿವರಾತ್ರಿಗೆ ನಿಮ್ಮ ಪಟ್ಟವನ್ನು ಬಿಟ್ಟುಕೊಡಬೇಕು ಎಂದು ಹೇಳಿ ಆವಾಜ್ ಹಾಕಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ವಾಟ್ಸಪ್ ಮತ್ತು ಇನ್ ಸ್ಟಾ ಗ್ರಾಮಿನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೂ ಕಾರಣವಾಗಿದೆ. ವ್ಯಕ್ತಿಯೊಬ್ಬ ವೀರೇಂದ್ರ ಹೆಗ್ಗಡೆಯವರ ಬೂಡಿನ ಮನೆಯ ಒಳಗಡೆ ಇತರೇ ಭಕ್ತರಂತೆ ಸರದಿಯಲ್ಲಿ ಹೋಗಿದ್ದು ಈ ವೇಳೆ ತನ್ನಲ್ಲಿರುವ ಮೊಬೈಲ್ ಕ್ಯಾಮರಾವನ್ನು ರೆಕಾರ್ಡ್ ನಲ್ಲಿ ಇಟ್ಟಿದ್ದು ಕಂಡುಬರುತ್ತದೆ. ಆನಂತರ ತನ್ನ ಸರದಿ ಬಂದಾಗ, ಹೆಗ್ಗಡೆಯವರನ್ನು ಕುರಿತಾಗಿ ನೇರ ಪ್ರಶ್ನೆ ಮಾಡಿದ್ದಾನೆ.

ಈ ಕ್ಷೇತ್ರದಲ್ಲಿ ಧರ್ಮ ಇದೆಯೆಂದು ನೀವು ಹೇಳುತ್ತೀರಾ ಎಂದು ಪ್ರಶ್ನೆ ಮಾಡಿರುವ ಆ ವ್ಯಕ್ತಿ, ಆನಂತರ ಹತ್ತು ವರ್ಷಗಳ ಹಿಂದೂ ಇಲ್ಲಿಗೆ ಬಂದು ಪ್ರಶ್ನಿಸಿದ್ದೆ. ನಿಮಗೆ ನೆನಪಿದೆಯಾ ಎಂದು ಕೇಳುತ್ತಾನೆ. ನೆನಪು ಇದೆ ಎಂದು ಹೆಗ್ಗಡೆ ಹೇಳಿದಾಗ, ನೀವು ಈಗಲೂ ಈ ಕ್ಷೇತ್ರದಲ್ಲಿ ಧರ್ಮ ಇದೆ ಎಂದು ಹೇಳುತ್ತೀರಾ.. ನೀವು ಧರ್ಮ ಇದೆಯೆಂದು ಅಣ್ಣಪ್ಪನ ಎದುರಲ್ಲಿ ಹೇಳುತ್ತೀರಾ. ಮುಂದಿನ ಮಕರ ಸಂಕ್ರಾಂತಿಯಂದು ದೈವದ ಮುಂದೆ ಬರಲು ರೆಡಿ ಇದ್ದೀರಾ ಎಂದು ಪ್ರಶ್ನೆ ಮಾಡುತ್ತಾನೆ. ನಾನು ಕದ್ರಿ ದೇವಸ್ಥಾನದ ಅಂಗಣಕ್ಕೂ ಬೈಕಿನಲ್ಲಿ ಹೋಗಿದ್ದೆ. ಆನಂತರ, ಒಳಗಡೆ ಹೋಗಿ ದೇವಸ್ಥಾನದ ಶಿಖರಕ್ಕೆ ಹತ್ತಿದ್ದೇನೆ. ಧರ್ಮಸ್ಥಳಕ್ಕೂ ಕದ್ರಿಯೇ ಮೂಲ. ನೀವು ಈ ಕ್ಷೇತ್ರವನ್ನು ಬಿಟ್ಟು ಕೊಡಬೇಕು ಎಂದು ಹೇಳುತ್ತಾನೆ.
ಇದಲ್ಲದೆ, ನಿಮ್ಮ ಜೊತೆಗೆ ಒಬ್ಬನೇ ಮಾತನಾಡಬೇಕೆಂಬ ಬಯಕೆ ಇದೆ, ಸಿಬಂದಿ ಯಾರೂ ಜೊತೆಗೆ ಇರಬಾರದು ಎಂದು ಹೇಳುತ್ತಾನೆ. ಅದಕ್ಕೆ ಹೆಗ್ಗಡೆಯವರು ಅದು ಆಗಲ್ಲ, ಇಲ್ಲಿಯೇ ಪ್ರಶ್ನೆ ಕೇಳಿ ಎನ್ನುತ್ತಾರೆ. ಹೆಗ್ಗಡೆಯವರ ಪರಿಚಾರಕರು, ಸಿಬಂದಿಗಳ ಎದುರಲ್ಲೇ ಈ ವ್ಯಕ್ತಿ ಪ್ರಶ್ನೆ ಮಾಡಿದ್ದು, ಆನಂತರ ಅಣ್ಣಪ್ಪ ನೋಡಿಕೊಳ್ಳುತ್ತಾನೆ ಎಂದು ಹೇಳುತ್ತ ಹೊರ ನಡೆದಿದ್ದಾನೆ. ಇದರ ವಿಡಿಯೋವನ್ನು ಸೌಜನ್ಯಾ ಹೋರಾಟಗಾರರು ತಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ. ಈ ರೀತಿ ಮಾತನಾಡಿ ವಿಡಿಯೋ ಮಾಡಿರುವ ವ್ಯಕ್ತಿ ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ತಿಳಿದುಬಂದಿದೆ.
A video has gone viral on social media showing a man confronting Dharmasthala Dharmadhikari Dr. D. Veerendra Heggade and asking him to relinquish his position by Shivaratri.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am