ಬ್ರೇಕಿಂಗ್ ನ್ಯೂಸ್
06-02-26 09:01 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಧರ್ಮಸ್ಥಳಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಲ್ಲಿ ನೀವು ಇದೇ ಶಿವರಾತ್ರಿಗೆ ನಿಮ್ಮ ಪಟ್ಟವನ್ನು ಬಿಟ್ಟುಕೊಡಬೇಕು ಎಂದು ಹೇಳಿ ಆವಾಜ್ ಹಾಕಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ವಾಟ್ಸಪ್ ಮತ್ತು ಇನ್ ಸ್ಟಾ ಗ್ರಾಮಿನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೂ ಕಾರಣವಾಗಿದೆ. ವ್ಯಕ್ತಿಯೊಬ್ಬ ವೀರೇಂದ್ರ ಹೆಗ್ಗಡೆಯವರ ಬೂಡಿನ ಮನೆಯ ಒಳಗಡೆ ಇತರೇ ಭಕ್ತರಂತೆ ಸರದಿಯಲ್ಲಿ ಹೋಗಿದ್ದು ಈ ವೇಳೆ ತನ್ನಲ್ಲಿರುವ ಮೊಬೈಲ್ ಕ್ಯಾಮರಾವನ್ನು ರೆಕಾರ್ಡ್ ನಲ್ಲಿ ಇಟ್ಟಿದ್ದು ಕಂಡುಬರುತ್ತದೆ. ಆನಂತರ ತನ್ನ ಸರದಿ ಬಂದಾಗ, ಹೆಗ್ಗಡೆಯವರನ್ನು ಕುರಿತಾಗಿ ನೇರ ಪ್ರಶ್ನೆ ಮಾಡಿದ್ದಾನೆ.

ಈ ಕ್ಷೇತ್ರದಲ್ಲಿ ಧರ್ಮ ಇದೆಯೆಂದು ನೀವು ಹೇಳುತ್ತೀರಾ ಎಂದು ಪ್ರಶ್ನೆ ಮಾಡಿರುವ ಆ ವ್ಯಕ್ತಿ, ಆನಂತರ ಹತ್ತು ವರ್ಷಗಳ ಹಿಂದೂ ಇಲ್ಲಿಗೆ ಬಂದು ಪ್ರಶ್ನಿಸಿದ್ದೆ. ನಿಮಗೆ ನೆನಪಿದೆಯಾ ಎಂದು ಕೇಳುತ್ತಾನೆ. ನೆನಪು ಇದೆ ಎಂದು ಹೆಗ್ಗಡೆ ಹೇಳಿದಾಗ, ನೀವು ಈಗಲೂ ಈ ಕ್ಷೇತ್ರದಲ್ಲಿ ಧರ್ಮ ಇದೆ ಎಂದು ಹೇಳುತ್ತೀರಾ.. ನೀವು ಧರ್ಮ ಇದೆಯೆಂದು ಅಣ್ಣಪ್ಪನ ಎದುರಲ್ಲಿ ಹೇಳುತ್ತೀರಾ. ಮುಂದಿನ ಮಕರ ಸಂಕ್ರಾಂತಿಯಂದು ದೈವದ ಮುಂದೆ ಬರಲು ರೆಡಿ ಇದ್ದೀರಾ ಎಂದು ಪ್ರಶ್ನೆ ಮಾಡುತ್ತಾನೆ. ನಾನು ಕದ್ರಿ ದೇವಸ್ಥಾನದ ಅಂಗಣಕ್ಕೂ ಬೈಕಿನಲ್ಲಿ ಹೋಗಿದ್ದೆ. ಆನಂತರ, ಒಳಗಡೆ ಹೋಗಿ ದೇವಸ್ಥಾನದ ಶಿಖರಕ್ಕೆ ಹತ್ತಿದ್ದೇನೆ. ಧರ್ಮಸ್ಥಳಕ್ಕೂ ಕದ್ರಿಯೇ ಮೂಲ. ನೀವು ಈ ಕ್ಷೇತ್ರವನ್ನು ಬಿಟ್ಟು ಕೊಡಬೇಕು ಎಂದು ಹೇಳುತ್ತಾನೆ.
ಇದಲ್ಲದೆ, ನಿಮ್ಮ ಜೊತೆಗೆ ಒಬ್ಬನೇ ಮಾತನಾಡಬೇಕೆಂಬ ಬಯಕೆ ಇದೆ, ಸಿಬಂದಿ ಯಾರೂ ಜೊತೆಗೆ ಇರಬಾರದು ಎಂದು ಹೇಳುತ್ತಾನೆ. ಅದಕ್ಕೆ ಹೆಗ್ಗಡೆಯವರು ಅದು ಆಗಲ್ಲ, ಇಲ್ಲಿಯೇ ಪ್ರಶ್ನೆ ಕೇಳಿ ಎನ್ನುತ್ತಾರೆ. ಹೆಗ್ಗಡೆಯವರ ಪರಿಚಾರಕರು, ಸಿಬಂದಿಗಳ ಎದುರಲ್ಲೇ ಈ ವ್ಯಕ್ತಿ ಪ್ರಶ್ನೆ ಮಾಡಿದ್ದು, ಆನಂತರ ಅಣ್ಣಪ್ಪ ನೋಡಿಕೊಳ್ಳುತ್ತಾನೆ ಎಂದು ಹೇಳುತ್ತ ಹೊರ ನಡೆದಿದ್ದಾನೆ. ಇದರ ವಿಡಿಯೋವನ್ನು ಸೌಜನ್ಯಾ ಹೋರಾಟಗಾರರು ತಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ. ಈ ರೀತಿ ಮಾತನಾಡಿ ವಿಡಿಯೋ ಮಾಡಿರುವ ವ್ಯಕ್ತಿ ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ತಿಳಿದುಬಂದಿದೆ.
A video has gone viral on social media showing a man confronting Dharmasthala Dharmadhikari Dr. D. Veerendra Heggade and asking him to relinquish his position by Shivaratri.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 10:42 pm
Mangalore Correspondent
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm