ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.


ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm