ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.


ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am