ಬ್ರೇಕಿಂಗ್ ನ್ಯೂಸ್
09-02-26 08:02 pm Mangalore Correspondent ಕರಾವಳಿ
ಮಂಗಳೂರು, ಫೆ.9 : ಮೊನ್ನೆ ನಂತೂರಿನಲ್ಲಿ ಅಪಘಾತಕ್ಕೀಡಾಗಿ ಯುವತಿ ಸಾವಿಗೆ ಕಾರಣವಾಗಿದ್ದ ಖಾಸಗಿ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಫೆ.4ರಂದು 22 ನಂಬರಿನ ಶ್ರೀ ಗಣೇಶ್ ಹೆಸರಿನ ಖಾಸಗಿ ಬಸ್ ನಂತೂರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ಸಿನಡಿಗೆ ಬಿದ್ದು ಸಾವನ್ನಪ್ಪಿದ್ದಳು. ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಭಾರೀ ಆಕ್ರೋಶ ಉಂಟಾಗಿತ್ತು. ಮರುದಿನ ಕದ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆದಿತ್ತು. ಮೂರು ದಿನಗಳ ಕಾಲ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇಂದು ಮಧ್ಯಾಹ್ನ ವೇಳೆಗೆ ಬಸ್ ವಾಮಂಜೂರು ಮೂಲಕ ಕೈಕಂಬಕ್ಕೆ ಹೋಗಿದ್ದಾಗ ಎಡಬದಿಯಿಂದ ಬಂದ ಬೈಕ್ ಅಡಿಗೆ ಬಿದ್ದಿದೆ ಎನ್ನಲಾಗಿದೆ. ಸವಾರನ ಕಾಲಿಗೆ ಪೆಟ್ಟು ಬಿದ್ದಿದ್ದು ಅದೃಷ್ಟದಿಂದ ಪ್ರಾಣಕ್ಕೆ ತೊಂದರೆಯಾಗಿಲ್ಲ. ಬಳಿಕ, ಬಸ್ ಕಡೆಯವರು ಮತ್ತು ಗಾಯಗೊಂಡ ವ್ಯಕ್ತಿ ಕೇಸು ಇಲ್ಲದೆ ಮಾತುಕತೆ ಮೂಲಕ ಬಗೆಹರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಅಪಘಾತ ಸಂದರ್ಭದಲ್ಲಿ ಬಸ್ಸಿನ ಚಾಲಕ ಮೊನ್ನೆ ಇದ್ದವರಲ್ಲ, ಬೇರೆ ಇದ್ದರೆಂದು ತಿಳಿದುಬಂದಿದೆ. ಆದರೆ ಬೈಕ್ ಬಸ್ಸಿನಡಿಗೆ ಬಿದ್ದ ದೃಶ್ಯದ ಫೋಟೊ ವೈರಲ್ ಆಗಿದ್ದು ಮೊನ್ನೆಯ ಬಸ್ ಮತ್ತೆ ಅಪಘಾತಕ್ಕೀಡಾಗಿದೆ, ಸವಾರ ಗಂಭೀರ ಎಂದು ಸುದ್ದಿ ಹಬ್ಬಿತ್ತು.
Days after a fatal accident in Nanthoor, the same private bus was involved in another mishap near Gurupura Kaikamba. A bike reportedly came under the bus, but the rider escaped with minor injuries. Police said the matter was later settled mutually, and a different driver was at the wheel during the latest incident.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm