ಬ್ರೇಕಿಂಗ್ ನ್ಯೂಸ್
10-02-26 08:27 pm Mangalore Correspondent ಕರಾವಳಿ
ಮಂಗಳೂರು, ಫೆ.11: ನಗರದ ಕಾವೂರು ಮೂಲದ ಯುವಕನೊಬ್ಬ ಮ್ಯಾಟ್ರಿಮನಿ ಸೈಟ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಮುಂಬೈ, ಉಡುಪಿ ಹೀಗೆ ಹಲವೆಡೆ ಯುವತಿಯರನ್ನು ಮದುವೆಯಾಗಿ ಅವರಿಂದ ಹಣ ಪಡೆದು ವಂಚಿಸಿದ್ದಲ್ಲದೆ, ಇನ್ನೂ ಹಲವು ಯುವತಿಯರನ್ನು ಮದುವೆಯಾಗುವ ಭರವಸೆ ನೀಡಿ ಹಣ ಪಡೆದು ಮೋಸಗೈದು ಕಂತ್ರಿ ಬುದ್ಧಿ ತೋರಿಸಿ ಕಾವೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಕಾವೂರು ಮೂಲದ ಸುಶಾಂತ್ ಪೂಜಾರಿ ಅಲಿಯಾಸ್ ಸುಶಾಂತ್ ಅಂಕುಶ್ ಪೂಜಾರಿ, ಸುಶಾಂತ್ ಜಿ. ಕರ್ಕೇರಾ (32) ಎಂದು ಕರೆಸಿಕೊಳ್ಳುತ್ತಿದ್ದ ಯುವಕ ಮತ್ತು ಈತನಿಗೆ ಮುಂಬೈನಲ್ಲಿ ಮದುವೆಯಾಗಲು ಸಹಕರಿಸಿದ್ದ ಮುಲ್ಕಿ ನಿವಾಸಿ ಭಾಸ್ಕರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಮೂಲದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿ ಮ್ಯಾಟ್ರಿಮೊನಿ ಸೈಟ್ ಮೂಲಕ ಪರಿಚಯವಾಗಿದ್ದು ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 2025ರ ಫೆ.2ರಂದು ಆಕೆಯನ್ನು ಮದುವೆಯಾಗಿದ್ದ. ಆನಂತರ, ಹಂತ ಹಂತವಾಗಿ 6,60,000 ರೂ. ಹಣವನ್ನು ಪಡೆದು ಕಳೆದ ನವೆಂಬರ್ 15ರಂದು ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿ ಮಹಿಳೆ ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಹಲವಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರನ್ನು ಮೋಸ ಮಾಡಿರುವ ವಿಷಯ ತಿಳಿದುಬಂದಿದೆ.
ಅಲ್ಲದೆ, ಈತನಿಗೆ ಈ ಮೊದಲು ಒಂದು ಮದುವೆ ಆಗಿರುವ ವಿಚಾರವೂ ತಿಳಿದ ಮೇರೆಗೆ ನೊಂದ ಮುಂಬೈ ಮೂಲದ ಮಹಿಳೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿದ್ದರು. ಸದ್ರಿ ಪ್ರಕರಣದ ಆರೋಪಿ ಸುಶಾಂತ್ ಪೂಜಾರಿಯನ್ನು ಫೆ.05ರಂದು ಪತ್ತೆಹಚ್ಚಿ ದಸ್ತಗಿರಿ ಮಾಡಲಾಗಿದೆ. ವಿಚಾರಣೆ ನಡೆಸಿದಾಗ ಆರೋಪಿ ಸುಶಾಂತ್ ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯ ಮಾಡಿಕೊಂಡು ಈ ಮೊದಲು 2021ರಲ್ಲಿ ಉಡುಪಿ ಮೂಲದ ಯುವತಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಉಡುಪಿಯಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದಿದ್ದಾನೆ. ಮುಂಬೈನಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ.
ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವ ಭರವಸೆಯಿಂದ ಮೋಸ ಮಾಡಿದ್ದಾನೆ. ಕಾರ್ಕಳದಲ್ಲಿ ಒಬ್ಬಳು ಹುಡುಗಿಯನ್ನು ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿರುವ ಬಗ್ಗೆಯೂ ಪೊಲೀಸರ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ. ಆರೋಪಿ ಸುಶಾಂತ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಸದ್ರಿ ಪ್ರಕರಣದಲ್ಲಿ ಆರೋಪಿ ಸುಶಾಂತ್ ಪೂಜಾರಿಗೆ ಮುಂಬೈನಲ್ಲಿ ಮದುವೆಯಾಗಲು ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತ ಸಹಕರಿಸಿದ್ದಾನೆ. ಮುಂಬೈನ ಮಹಿಳೆಯ ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿ ಸುಶಾಂತ್ ತನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಮೋಸ ಮಾಡಿದ್ದಾನೆ. ಸುಶಾಂತ್ ಪೂಜಾರಿ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿ ವಿಧಾನದಲ್ಲಿ ಪಾಲ್ಗೊಂಡಿದ್ದ. ಇದಕ್ಕಾಗಿ ಈತನನ್ನೂ ದಸ್ತಗಿರಿ ಮಾಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಹಲವಾರು ಹೆಂಡಿರ ಮುದ್ದಿನ ಗಂಡ ಆರೋಪಿ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಉರ್ವಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2), (ಎನ್) 342, ಜೊತೆಗೆ 34 ಐಪಿಸಿ ಕಲಂ:3, 4, 5 ಸೇರಿದಂತೆ ಕಲಂ:4, 8, 12 ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.
A 32-year-old man from Kavoor, identified as Sushanth Poojari alias Sushanth Ankush Poojari, has been arrested for allegedly cheating multiple women across Mumbai, Udupi, Bengaluru, and Karkala after befriending them through matrimonial websites.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm