ಬ್ರೇಕಿಂಗ್ ನ್ಯೂಸ್
11-02-26 03:45 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಮಂಗಳೂರು - ಮೂಡುಬಿದ್ರೆ ಹೆದ್ದಾರಿಯ ಎಡಪದವು ಸಮೀಪದ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಹಾಲಿ ಇರುವ ಹಳೆ ರಸ್ತೆ ಘನ ವಾಹನಗಳ ಓಡಾಟದಿಂದ ಬಿರುಕು ಬಿಟ್ಟಿದೆ. ಅಪಾಯ ಕಂಡುಬಂದಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆಬ್ರವರಿ 12 ರಿಂದ ಮಾರ್ಚ್ 13-ರ ವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಸಲಿದ್ದು ಸದ್ರಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಸೂಚಿಸಲಾಗಿದೆ.





ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಟಿಯಿಂದ ಮಂಗಳೂರು - ಮೂಡಬಿದ್ರೆ ನಡುವೆ ಸಂಚರಿಸುವ ವಾಹನಗಳು ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಲು ಸೂಚಿಸಲಾಗಿದೆ.
ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.
ಅಧಿಕಾರಿಗಳ ಅಸಡ್ಡೆಗೆ ಜನರಿಗೆ ಹೊರೆ !
ಎಡಪದವು ಬಳಿಯ ಏರು ರಸ್ತೆ ಇರುವಲ್ಲಿ ಹೊಸ ಹೆದ್ದಾರಿ ಮಾಡುವುದಕ್ಕಾಗಿ ಪ್ರಪಾತ ರೀತಿ ಅಗೆಯಲಾಗಿದೆ. ಕಳೆದ ಬೇಸಗೆಯಲ್ಲಿ ಅಲ್ಲಿ ಕೆಂಪು ಕಲ್ಲು ತೆಗೆದು ಮಾರಾಟ ಮಾಡಲಾಗಿತ್ತು. ಮೇಲ್ಭಾಗದಲ್ಲಿ ರಸ್ತೆ ಇದ್ದರೂ ಅದರ ಅಂಚಿನ ವರೆಗೂ ಅಗೆದಿದ್ದರಿಂದ ಈಗ ಕುಸಿತವಾಗಿದೆ. ಹೆದ್ದಾರಿ ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಕುಸಿಯುತ್ತಿರುವ ಕಾರಣ ಹಳೆ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು- ಮೂಡುಬಿದ್ರೆ ಸಂಪರ್ಕಕ್ಕೆ ಪ್ರಯಾಣಿಕ ವಾಹನಗಳು ಸುತ್ತು ಬಳಸಿ ಹೋಗುವಂತಾಗಿದೆ. ಇಲ್ಲಿ ರಸ್ತೆ ಕುಸಿಯಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕಿದೆ.
Due to excavation work for a new highway near Machoor Cross at Edapadavu, the existing Mangaluru–Moodbidri road has developed cracks and become unsafe for heavy vehicles. The National Highways Authority has announced a 30-day closure from February 12 to March 13, with traffic diverted through alternate routes.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am