ಬ್ರೇಕಿಂಗ್ ನ್ಯೂಸ್
12-02-26 03:01 pm Mangalore Correspondent ಕರಾವಳಿ
ಮಂಗಳೂರು, ಫೆ.12 : ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ಕಾರಣದಿಂದ 120ಕ್ಕು ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬುಧವಾರ 30 ರಷ್ಟು ಮಂದಿ ಅನಾರೋಗ್ಯಕ್ಕೆ ತುತ್ತಾಗಿದ್ದು ಸಂಸ್ಥೆ ಆವರಣದ ಚಿಕಿತ್ಸಾಲಯದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ.
ಫೆ.4ರಿಂದ 8ರ ವರೆಗೆ ಎನ್ಐಟಿಕೆ ಕ್ಯಾಂಪಸಿನಲ್ಲಿ ವಿರಾಸತ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ, ಹೊರಗಿನ ಆಹಾರ, ಖಾದ್ಯಗಳ ಸ್ಟಾಲ್ ಹಾಕಲಾಗಿತ್ತು. ಇದನ್ನು ತಿಂದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ಲೂಸ್ ಮೋಶನ್ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 2-3 ದಿನದಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆಂಬ ಮಾಹಿತಿ ಇದೆ.
ಘಟನೆ ಹಿನ್ನೆಲೆಯಲ್ಲಿ ಹೊರಗಿನಿಂದ ಆಹಾರ ವಿತರಣೆಯನ್ನು ಒಂದು ವಾರದ ಮಟ್ಟಿಗೆ ನಿರ್ಬಂಧಿಸಲಾಗಿದೆ. ಕುಡಿಯುವ ನೀರು ಪೂರೈಸುವ ವಾಟರ್ ಪ್ಯೂರಿಫೈರ್ ಯಂತ್ರವನ್ನು ಮತ್ತು ನೀರನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ನಲ್ಲಿಯಲ್ಲಿ ಬರುವ ನೀರನ್ನು ನೇರವಾಗಿ ಅಡುಗೆ ಉದ್ದೇಶಕ್ಕೆ ಬಳಸದಂತೆ ಸೂಚಿಸಲಾಗಿದೆ. ನೀರಿನಲ್ಲಿ ತೊಂದರೆ ಇದೆಯೇ ಎಂದು ತಿಳಿಯಲು ಹೊರಗಿನ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ ಎಂದು ಎನ್ಐಟಿಕೆ ನಿರ್ದೇಶಕ ಬಿ.ರವಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೇನೂ ಹೆಚ್ಚಿನ ತೊಂದರೆ ಆಗಿಲ್ಲ. ಈಗ ಬಹಳಷ್ಟು ಮಂದಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಎನ್ಐಟಿಕೆ ಕ್ಯಾಂಪಸ್ ಒಳಗಿನ ಕ್ಯಾಂಟೀನಲ್ಲಿ ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳ ಬೇಡಿಕೆಯಂತೆ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮ ಸಂದರ್ಭದಲ್ಲಿ ಹೊರಗಿನ ನಾನ್ ವೆಜ್ ಖಾದ್ಯಗಳ ಸ್ಟಾಲ್ ಹಾಕಲಾಗಿತ್ತು.
Over 120 students at NITK Surathkal fell ill due to suspected food poisoning after consuming food from external stalls during the Virasat event. Students were treated at the campus health centre, and outside food supply has been temporarily banned. Water sources are also being tested as a precaution.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am