ಬ್ರೇಕಿಂಗ್ ನ್ಯೂಸ್
01-01-21 04:04 pm Mangalore Correspondent ಕರಾವಳಿ
ಮಂಗಳೂರು, ಜ.1 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಲ್ಲಿ ಭಾರೀ ಮೊತ್ತದ ಸಾರ್ವಜನಿಕ ಹಣ ದುರುಪಯೋಗವಾಗುತ್ತಿದೆ. ಕಳಪೆ ಕಾಮಗಾರಿಯಿಂದ ಕೋಟ್ಯಂತರ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ, ಮುಖ್ಯ ಸಚೇತಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರದ ರಥಬೀದಿಯಲ್ಲಿ ನಿರ್ಮಿಸಿದ ಕಾಂಕ್ರಿಟ್ ರಸ್ತೆ ನಿರ್ಮಾಣಗೊಂಡ ಎರಡೇ ತಿಂಗಳಲ್ಲಿ ಬಿರುಕು ಬಿಟ್ಟಿದೆ. ಕೆಲವು ಕಡೆ ಬಿರುಕು ಬಿಟ್ಟ ಕಾಂಕ್ರಿಟ್ ರಸ್ತೆಗಳಿಗೆ ತೇಪೆ ಹಾಕಲಾಗಿದೆ. ನಗರ ಭಾಗದಲ್ಲಿ ನಡೆಯುವ ಕಾಂಕ್ರೀಟ್ ರಸ್ತೆಗಳ ಸ್ಥಿತಿ ಹೀಗಾದರೆ ಹೇಗೆ? ಕಳಪೆ ಕಾಮಗಾರಿ ನಡೆಸಿರುವುದಕ್ಕೆ ಇದು ಸಾಕ್ಷ್ಯವಾಗಿದೆ. ಅಲ್ಲದೆ, ಕಾಮಗಾರಿಗಳ ಗುತ್ತಿಗೆ ನೀಡುವ ಸಂದರ್ಭದಲ್ಲೂ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಹೇಳಿದರು.

ಒಂದೂವರೆ ಕೋಟಿ ರೂ. ವೆಚ್ಚದ ಕಾಮಗಾರಿ ವ್ಯರ್ಥ
ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ನೆಪದಲ್ಲಿ ನೆಹರು ಮೈದಾನದಲ್ಲಿ ಮಾರುಕಟ್ಟೆ ನಿರ್ಮಿಸಲು ಸುಮಾರು ಒಂದೂವರೆ ಕೋಟಿ ರೂ. ವ್ಯಯ ಮಾಡಲಾಗಿದೆ. ಆದರೆ ಈ ಮೈದಾನವನ್ನು ಫುಟ್ಬಾಲ್ ಮೈದಾನವಾಗಿ ಉಳಿಸಿಕೊಳ್ಳಬೇಕು, ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರಿಂದ ಕೋಟ್ಯಂತರ ರೂ. ಸಾರ್ವಜನಿಕ ಹಣ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಪೋಲಾದಂತಾಗಿದೆ. ಇದು ಮಾತ್ರವಲ್ಲದೆ ನಗರದ ವಿವಿಧ ಕಡೆ ನಡೆಯುತ್ತಿರುವ ಕಾಮಗಾರಿಗಳೂ ಸರಿಯಾಗಿಲ್ಲ ಎಂದು ಅಬ್ದುಲ್ ರವೂಫ್ ದೂರಿದರು.

ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತ
ಸೂಕ್ತ ಮಾನದಂಡ ಪಾಲಿಸದ ಕಾರಣಕ್ಕೆ ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಂಡಿದೆ. ವೆನ್ಲಾಕ್ ಆಸ್ಪತ್ರೆ ಬಳಿಯ ಕಾಮಗಾರಿಗಳು ಸ್ಥಗಿತಗೊಂಡಿದ್ದು ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ಬರುವವರಿಗೂ ಸಮಸ್ಯೆ ಉಂಟಾಗುತ್ತಿದೆ. ಕೋಟ್ಯಂತರ ರೂ. ಮೊತ್ತವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ವ್ಯಯ ಮಾಡುತ್ತಿರುವ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದು ಸಾರ್ವಜನಿಕ ಹಣದ ದುರುಪಯೋಗ ಆಗುವುದಕ್ಕೆ ಕಾರಣವಾಗಿದೆ ಎಂದು ಅಬ್ದುಲ್ ರವೂಫ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯರಾದ ಶಶಿಧರ ಹೆಗ್ಡೆ, ಭಾಸ್ಕರ ಕೆ., ಲ್ಯಾನ್ಸ್ ಲೋಟ್ ಪಿಂಟೋ, ನವೀನ್ ಡಿಸೋಜ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಕೇಶವ ಮರೋಳಿ, ಝೀನತ್ ಸಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.
Opposition leader Abdul Rauf of Mangaluru City Corporation said, “The district administration has completely failed in undertaking Smart City works.”
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am