ಬ್ರೇಕಿಂಗ್ ನ್ಯೂಸ್
13-02-26 01:06 am HK News Desk ಕರಾವಳಿ
ಬೆಳ್ತಂಗಡಿ, ಫೆ.12: ವಿದ್ಯಾರ್ಥಿಗಳನ್ನು ಟಿಪ್ಪರ್ ಮತ್ತು ಪಿಕಪ್ ವಾಹನದಲ್ಲಿ ತುಂಬಿಸಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಘಟನೆ ಸಂಬಂಧಿಸಿ ಶಾಲೆಯ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ಮಕ್ಕಳನ್ನು ಕರೆದೊಯ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಲಾಗಿತ್ತು. ಅದೇ ವಾಹನದಲ್ಲಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್ ಚಾಲಕ ಪ್ರವೀಣ ಹಾಗೂ ಶಾಲೆಯ ಸಿಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am