ಬ್ರೇಕಿಂಗ್ ನ್ಯೂಸ್
16-02-26 11:02 pm HK Desk ಕರಾವಳಿ
ಕೊಪ್ಪಳ, ಫೆ.16: ಹಂಪಿ ಹತ್ತಿರ ನಡೆದ ಘೋರ ಹತ್ಯೆ-ಅತ್ಯಾಚಾರ ಪ್ರಕರಣದಲ್ಲಿ ಗಂಗಾವತಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇಸ್ರೇಲ್ ಹಾಗೂ ಭಾರತ ಮೂಲದ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಅಮೆರಿಕ ಮೂಲದ ಪ್ರವಾಸಿಗನ ಹತ್ಯೆ ಸಂಬಂಧಿಸಿದ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಗಂಗಾವತಿ ನ್ಯಾಯಾಲಯವು ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ತೀರ್ಪು ಪ್ರಕಟಿಸಿ, ಇಂತಹ ಕ್ರೂರ ಅಪರಾಧಗಳಿಗೆ ಸಮಾಜದಲ್ಲಿ ಯಾವುದೇ ಸ್ಥಳವಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಐವರು ಪ್ರವಾಸಿಗರು ಆನೆಗೊಂದಿಯ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಮಾ.6 ರಂದು ರಾತ್ರಿ ಊಟ ಮುಗಿಸಿ ಸುತ್ತಾಡಲು ಹೊರಗೆ ತೆರಳಿದ್ದರು. ಸಣಾಪೂರ ಕೆರೆಯ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಯ ಬಳಿ ಹೋಗಿ ಸಂಗೀತ ಆಲಿಸುತ್ತಾ ಕುಳಿತಾಗ ಮೂವರು ದುಷ್ಕರ್ಮಿಗಳು ಹಣ ಕಳ್ಳತನ ಮಾಡುವ ಉದ್ದೇಶದಿಂದ ಬಂದು ಗಲಾಟೆ ನಡೆಸಿದ್ದರು.
ಮದ್ಯದ ಅಮಲಿನಲ್ಲಿದ್ದ ದುಷ್ಕರ್ಮಿಗಳು ಮೂವರು ಪುರುಷರ ಮೇಲೆ ಹಲ್ಲೆ ನಡೆಸಿ ಕೆರೆಗೆ ತಳ್ಳಿದ್ದರು. ಜೊತೆಗೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆರೆಗೆ ಬಿದ್ದ ಮೂವರ ಪೈಕಿ ಇಬ್ಬರು ದಡಕ್ಕೆ ಸೇರಿದ್ದು, ಇನ್ನೋರ್ವನ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ದಡಕ್ಕೆ ಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಮೃತದೇಹ 24 ಗಂಟೆಗಳ ನಂತರ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.
ಕೊಲೆಯಾದ ಪ್ರವಾಸಿಯನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿತ್ತು. ಜರ್ಮನ್ ದೇಶದ ಡೇನೈಲ್ ಹಾಗೂ ಮಹಾರಾಷ್ಟ್ರ ಮೂಲದ ಪಂಕಜ್ ಗಾಯಗೊಂಡಿದ್ದರು. ಅತ್ಯಾಚಾರಕ್ಕೀಡಾದವರು ಓರ್ವ ಇಸ್ರೇಲ್ ಮಹಿಳೆ ಹಾಗೂ ಒಬ್ಬಳು ಭಾರತದ ಮಹಿಳೆ ಎಂದು ತಿಳಿದುಬಂದಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಹಂಪಿ ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರುವಂತಾಗಿತ್ತು.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಂತರ ನ್ಯಾಯಾಲಯವು ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am