ಬ್ರೇಕಿಂಗ್ ನ್ಯೂಸ್
16-02-26 11:02 pm HK Desk ಕರಾವಳಿ
ಕೊಪ್ಪಳ, ಫೆ.16: ಹಂಪಿ ಹತ್ತಿರ ನಡೆದ ಘೋರ ಹತ್ಯೆ-ಅತ್ಯಾಚಾರ ಪ್ರಕರಣದಲ್ಲಿ ಗಂಗಾವತಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇಸ್ರೇಲ್ ಹಾಗೂ ಭಾರತ ಮೂಲದ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಅಮೆರಿಕ ಮೂಲದ ಪ್ರವಾಸಿಗನ ಹತ್ಯೆ ಸಂಬಂಧಿಸಿದ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಗಂಗಾವತಿ ನ್ಯಾಯಾಲಯವು ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ತೀರ್ಪು ಪ್ರಕಟಿಸಿ, ಇಂತಹ ಕ್ರೂರ ಅಪರಾಧಗಳಿಗೆ ಸಮಾಜದಲ್ಲಿ ಯಾವುದೇ ಸ್ಥಳವಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಐವರು ಪ್ರವಾಸಿಗರು ಆನೆಗೊಂದಿಯ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಮಾ.6 ರಂದು ರಾತ್ರಿ ಊಟ ಮುಗಿಸಿ ಸುತ್ತಾಡಲು ಹೊರಗೆ ತೆರಳಿದ್ದರು. ಸಣಾಪೂರ ಕೆರೆಯ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಯ ಬಳಿ ಹೋಗಿ ಸಂಗೀತ ಆಲಿಸುತ್ತಾ ಕುಳಿತಾಗ ಮೂವರು ದುಷ್ಕರ್ಮಿಗಳು ಹಣ ಕಳ್ಳತನ ಮಾಡುವ ಉದ್ದೇಶದಿಂದ ಬಂದು ಗಲಾಟೆ ನಡೆಸಿದ್ದರು.
ಮದ್ಯದ ಅಮಲಿನಲ್ಲಿದ್ದ ದುಷ್ಕರ್ಮಿಗಳು ಮೂವರು ಪುರುಷರ ಮೇಲೆ ಹಲ್ಲೆ ನಡೆಸಿ ಕೆರೆಗೆ ತಳ್ಳಿದ್ದರು. ಜೊತೆಗೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆರೆಗೆ ಬಿದ್ದ ಮೂವರ ಪೈಕಿ ಇಬ್ಬರು ದಡಕ್ಕೆ ಸೇರಿದ್ದು, ಇನ್ನೋರ್ವನ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ದಡಕ್ಕೆ ಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಮೃತದೇಹ 24 ಗಂಟೆಗಳ ನಂತರ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.
ಕೊಲೆಯಾದ ಪ್ರವಾಸಿಯನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿತ್ತು. ಜರ್ಮನ್ ದೇಶದ ಡೇನೈಲ್ ಹಾಗೂ ಮಹಾರಾಷ್ಟ್ರ ಮೂಲದ ಪಂಕಜ್ ಗಾಯಗೊಂಡಿದ್ದರು. ಅತ್ಯಾಚಾರಕ್ಕೀಡಾದವರು ಓರ್ವ ಇಸ್ರೇಲ್ ಮಹಿಳೆ ಹಾಗೂ ಒಬ್ಬಳು ಭಾರತದ ಮಹಿಳೆ ಎಂದು ತಿಳಿದುಬಂದಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಹಂಪಿ ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರುವಂತಾಗಿತ್ತು.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಂತರ ನ್ಯಾಯಾಲಯವು ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm