ಬ್ರೇಕಿಂಗ್ ನ್ಯೂಸ್
16-02-26 11:13 pm Mangaluru Staffer ಕರಾವಳಿ
ಮಂಗಳೂರು, ಫೆ.16: ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರು ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ಕಡ್ಡಿ ಮುರಿದು ಬಿದ್ದಂತೆ ತುಂಡಾಗಿ ಬಿದ್ದಿದೆ.


ಡಿಕ್ಕಿಯಾಗುತ್ತಲೇ ಕಂಬ ರಸ್ತೆಗೆ ಬಿದ್ದಿದ್ದು ಮಧ್ಯದಲ್ಲಿ ವಿದ್ಯುತ್ ತಂತಿಯೂ ಬಿದ್ದಿದೆ. ಕೂಡಲೇ ಜನ ಸೇರಿದರೂ ಕರೆಂಟ್ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಇಬ್ಬರು ಸವಾರರು ಕೂಡ ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸು ದಾಖಲಿಸಿಲ್ಲ. ಮೆಸ್ಕಾಂ ಇಲಾಖೆಯವರು ಕೇಸು ಮಾಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ದೂರಕ್ಕೆ ಬಿದ್ದಿದ್ದಾರೆ.
#Accident Caught on CCTV: A speeding #bike crashes into an electric pole in Ullal, snapping the concrete column in half. Two youths survive in a miracle escape. A chilling reminder of the cost of overspeeding. #Breaking #Ullal #mangalore pic.twitter.com/Pj6Ak2C1Fi
— Headline Karnataka (@hknewsonline) February 16, 2026
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am