ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm