ಬ್ರೇಕಿಂಗ್ ನ್ಯೂಸ್
17-02-26 12:42 pm Mangaluru Staffer ಕರಾವಳಿ
ಮಂಗಳೂರು, ಫೆ.17: ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸ ತೆರಳುವುದರಲ್ಲಿ ತಪ್ಪೇನಿದೆ ಎನ್ನುವ ಅರ್ಥ ಬರುವಂತೆ ಗೃಹ ಸಚಿವ ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ. ಮಂಗಳೂರಿನಲ್ಲಿ ಪೊಲೀಸ್ ವಸತಿ ಉದ್ಘಾಟನೆಗೆ ಆಗಮಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಯಾಕೆ ಹೋಗ್ತಿದ್ದಾರೆ ಅಂತಾ ಗೊತ್ತಿಲ್ಲ. ಆದರೆ ಶಾಸಕರು ತಮ್ಮ ಹಣದಲ್ಲಿ ಎಲ್ಲಿ ಬೇಕಾದರೂ ಹೋಗಬಹುದು. ಅದಕ್ಕೆ ಸ್ವತಂತ್ರರಿದ್ದಾರೆ. ಅಧ್ಯಯನ ಪ್ರವಾಸ ಹೋಗುತ್ತಿದ್ದಾರೆ. ಆಸ್ಟ್ರೇಲಿಯಾ, ನ್ಯೂಜಿಲಂಡಿನಲ್ಲಿ ಕೃಷಿ ಇಲ್ವಾ.. ಯಾರು ಹೇಳಿದ್ದು ಇಲ್ಲಾಂತ. ನಾನೇ ಆಸ್ಟ್ರೇಲಿಯಾದಲ್ಲಿದ್ದೆ ಅಲ್ವಾ. ಕೃಷಿ ಅಧ್ಯಯನಕ್ಕಾಗಿ ತೆರಳುತ್ತಿದ್ದಾರೆ, ಅದರಲ್ಲೇನು ತಪ್ಪು ಅಂತ ಕಾಣುತ್ತಿಲ್ಲ ಎಂದವರು ಹೇಳಿದ್ದಾರೆ.
ಬಜೆಟ್ ಪ್ರಕ್ರಿಯೆ ಆಗ್ತಿರೋವಾಗ ಹೋಗುತ್ತಿರೋದು ಯಾಕೆ, ಅವರೆಲ್ಲ ಸಿದ್ದರಾಮಯ್ಯ ಬಣದವರೇ ಅಲ್ವಾ ಎಂಬ ಪ್ರಶ್ನೆಗೆ, ಬಜೆಟ್ ನಲ್ಲಿ ಅವರಿಗೇನು ಕೆಲಸ ಇರತ್ತೆ. ಬಜೆಟ್ ತಯಾರು ಮಾಡೋದು ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆಯವರು. ಶಾಸಕರು ಸಿಎಲ್ ಪಿ ಸಭೆಯಲ್ಲಿ ಬಜೆಟ್ ಕುರಿತು ತಮ್ಮ ಅನಿಸಿಕೆಗಳನ್ನು ಹೇಳಿದ್ದಾರೆ. ಇದೆಲ್ಲವನ್ನೂ ಕ್ರೋಡೀಕರಿಸಿ ಬಜೆಟ್ ತಯಾರು ಮಾಡುತ್ತಾರೆ. ನಮ್ಮಲ್ಲಿ ಸಿದ್ದರಾಮಯ್ಯ ಬಣ ಅಂತ ಇಲ್ಲ. ಎಲ್ಲ ಒಟ್ಟಿಗಿದ್ದೇವೆ, ನಮ್ಮಲ್ಲಿ ಯಾವ ಕುರ್ಚಿ ಕದನವೂ ಇಲ್ಲ ಎಂದು ಹೇಳಿದ್ದಾರೆ.
ಸಚಿವ ಎಚ್.ಸಿ ಮಹದೇವಪ್ಪ ದಲಿತ ಸಿಎಂ ಆಗಬೇಕೆಂದು ಹೇಳಿರುವ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಅದು ಅವರ ಅಭಿಪ್ರಾಯ ಹೇಳಿದ್ದಾರೆ. ಮಹದೇವಪ್ಪವರು ಕೂಡ ಸಿಎಂ ಆಗಲು ಸಮರ್ಥರಿದ್ದಾರೆ. ಯಾವುದೇ ಜವಬ್ದಾರಿ ಕೊಟ್ಟರೂ ತೆಗೆದುಕೊಳ್ಳುವುದಕ್ಕೆ ಅವರಿಗೆ ಸಾಮರ್ಥ್ಯ ಇದೆ. ಅದಕ್ಕೆ ಅವರು ಹೇಳಿದ್ದಾರೆ. ಜನ ಸಮುದಾಯದಲ್ಲಿ ಕೆಲವರು ಅವರವರ ಲೀಡರ್ ಅಂತಾ ಆರಿಸಿಕೊಳ್ಳುತ್ತಾರೆ. ಜನ ಅವರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಅದನ್ನು ತಪ್ಪು ಅಂತಾ ನಾವು ಹೇಳುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಅದು. ನನಗೂ ಆ ಅಭಿಪ್ರಾಯ ಇದೆ, ದಲಿತ ಸಿಎಂ ಯಾಕಾಗಬಾರದು?
ಆದರೆ ನಮ್ಮಲ್ಲಿ ಒಂದು ವ್ಯವಸ್ಥೆ ಇದೆ, ಹೈಕಮಾಂಡ್ ಇದೆ, ಸಂದರ್ಭ ಇದೆ. ಹೈಕಮಾಂಡ್ ಆ ಬಗ್ಗೆ ತೀರ್ಮಾನ ಮಾಡ್ತಾರೆ. ಯಾರೋ ಹತ್ತು ಜನ ನನ್ನ ಪರವಾಗಿ ಜೈಕಾರ ಹಾಕಿದ್ರೆ ಸಿಎಂ ಆಗಲ್ಲ. ಆದ್ರೆ ಹೈಕಮಾಂಡ್ ನವರು ಅದನ್ನೆಲ್ಲಾ ನೋಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈಗ ಆ ಸಂದರ್ಭ ಇದೆ ಅಂತಾ ನನಗೆ ಅನಿಸಲ್ಲ. ಈಗ ದಲಿತ ಸಿ.ಎಂ ಎಂಬ ಚರ್ಚೆಯೇ ಇಲ್ಲ. ನಾವು ಆಡಳಿತದ ಮೇಲೆ ನಿಗಾ ಇರಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಹಿಂದುಗಳ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಚಿಕ್ಕಮಗಳೂರು ಘಟನೆ ಸಂಬಂಧ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತಾರೆ. ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ. ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದು ಹೇಳಿದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm