ಬ್ರೇಕಿಂಗ್ ನ್ಯೂಸ್
19-02-26 06:08 pm mangalore ಕರಾವಳಿ
ಮಂಗಳೂರು, ಫೆ.19 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ಧತೆಗಳು ಬಿರುಸುಗೊಳ್ಳುತ್ತಿರುವಂತೆಯೇ ಬಿ.ಸಿ.ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಸಮಾಲೋಚನಾ ಸಭೆ ನಡೆಸಿದರು.
ಮಾಜಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ಮಾಡಿದರು.


ಸಭೆಯ ಕೊನೆಯಲ್ಲಿ "ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ" ರಚಿಸಲು, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳ್ಳುವವರೆಗೂ ಅವಿರತ ಹೋರಾಟ ನಡೆಸಲು ಸಭೆ ನಿರ್ಧರಿಸಿತು. ಹೋರಾಟ ಸಮಿತಿಗೆ ಬಿ ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ ಶೇಖರ್ ಹಾಗು ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮುಂದಿನ ದಿನದಲ್ಲಿ ಸಮಾನ ಮನಸ್ಕರಾದ ಎಲ್ಲರನ್ನು ಒಳಗೊಂಡ ಸಮಾವೇಶ ನಡೆಸಿ ಪೂರ್ಣ ಪ್ರಮಾಣದ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಮಾರ್ಚ್ 3ರಂದು ಸಾಮೂಹಿಕ ಧರಣಿ
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನೂತನ ಸಮಿತಿ ವತಿಯಿಂದ, ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3 ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ ಬೃಹತ್ ಸಾಮೂಹಿಕ ಧರಣಿ ನಡೆಸುವುದಾಗಿ ಸಭೆ ತೀರ್ಮಾನಿಸಿತು. ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರ ಹೋರಾಟ ಸಂಘಟಿಸುವುದು, ಟೋಲ್ ಗೇಟ್ ತೆರವುಗೊಳಿಸಿಯೇ ವಿಶ್ರಮಿಸುವುದು ಎಂದು ಸಭೆಯಲ್ಲಿ ನಿರ್ಧಾರಕ್ಕೆ ಬರಲಾಯಿತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am