ಬ್ರೇಕಿಂಗ್ ನ್ಯೂಸ್
20-02-26 06:05 pm Mangalore Correspondent ಕರಾವಳಿ
ಮಂಗಳೂರು, ಫೆ.20: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಎಸಿ ಕುರಿಯನ್ ಎಂಬವರ ಅಡಿಕೆ ತೋಟದಲ್ಲಿ ಮೇಲ್ವಿಚಾರಕನಾಗಿದ್ದ ಶ್ರೀಧರ ಮುಗೇರ ಕೊಲೆ ಪ್ರಕರಣದಲ್ಲಿ ಮರು ತನಿಖೆಗಾಗಿ ಹೈಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಮಾಡಿದೆ.
2022ರ ಡಿಸೆಂಬರ್ 18ರಂದು ಶ್ರೀಧರ್ ಮುಗೇರ ಅವರ ಶವ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸಿದ ಧರ್ಮಸ್ಥಳ ಠಾಣೆ ಪೊಲೀಸರು 2023ರ ಜನವರಿಯಲ್ಲಿ ತಿಮ್ಮಪ್ಪ ಪೂಜಾರಿ, ಆನಂದ ಗೌಡ, ಲಕ್ಷ್ಮಣ ಪೂಜಾರಿ ಮತ್ತು ಮಹೇಶ್ ಪೂಜಾರಿ ಆರೋಪಿಗಳೆಂದು ಬಂಧಿಸಿದ್ದರು. ಆನಂತರ, ಪ್ರಕರಣದ ತನಿಖೆಯನ್ನು ಸಾಮಾಜಿಕ ಕಾರ್ಯಕರ್ತರ ಒತ್ತಡದ ಮೇರೆಗೆ ಸಿಐಡಿಗೆ ವರ್ಗಾಯಿಸಲಾಗಿತ್ತು.

ಶ್ರೀಧರ ಮುಗೇರ ಶವ ಹಲ್ಲೆಗೀಡಾಗಿ ಬೆತ್ತಲೆಯಾಗಿ ಬಿದ್ದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರೋಪಿಗಳು ಇವರನ್ನು ಕೊಲೆಗೈದು ಶವವನ್ನು 300 ಮೀಟರ್ ದೂರದಲ್ಲಿ ಬಿಸಾಕಿದ್ದಾಗಿ ಆರೋಪಗಳಿದ್ದವು. ಆದರೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸಾಕ್ಷ್ಯಾಧಾರಗಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದು ಕುಟುಂಬಸ್ಥರನ್ನು ಕೆರಳಿಸಿತ್ತು. ಹೀಗಾಗಿ ಮರು ತನಿಖೆಗಾಗಿ ವಿಶೇಷ ತನಿಖಾ ತಂಡ ನೇಮಿಸಬೇಕೆಂದು ಹೈಕೋರ್ಟಿಗೆ ಕುಟುಂಬ ಮನವಿ ಮಾಡಿತ್ತು. ಇದಲ್ಲದೆ, ಕೊಲೆಯಾದ ಬಗ್ಗೆ ಬಲವಾದ ಅನುಮಾನಗಳನ್ನು ವ್ಯಕ್ತಪಡಿಸಿತ್ತು. ಇದರಂತೆ, ಹೈಕೋರ್ಟ್ ಎಸ್ಐಟಿ ರಚಿಸುವಂತೆ 2025ರ ಸೆಪ್ಟಂಬರ್ ನಲ್ಲಿ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.
ಹೈಕೋರ್ಟ್ ಸೂಚನೆಯಂತೆ ಇದೀ ರಾಜ್ಯ ಡಿಜಿಪಿ ಡಾ.ಎಂ.ಎ. ಸಲೀಂ ಅವರು ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಇದರಲ್ಲಿ ಹಾಲಿ ಉಡುಪಿ ಎಸ್ಪಿ ಆಗಿರುವ ಹರಿರಾಮ್ ಶಂಕರ್ ಮತ್ತು ಬೆಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿಯಾಗಿರುವ ಎಂ.ಆರ್ ಹರೀಶ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm