ಬ್ರೇಕಿಂಗ್ ನ್ಯೂಸ್
21-02-26 09:02 pm Mangaluru Staffer ಕರಾವಳಿ
ಉಳ್ಳಾಲ, ಫೆ.21: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡಾ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗಳೊಬ್ಬಳು ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.


ಈ ವೇಳೆ ತನುಷ್ಕಾ ಲೂಡೊ ಆಟದಲ್ಲಿ ಬಳಸಲಾಗುವ ಹೊಸ ಶಂಕು ಆಕಾರದ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕಾಯ್ನ್ ಲಭಿಸಿದೆ. ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಹೈಸ್ಕೂಲ್ ನಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ದಿಢೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm