ಬ್ರೇಕಿಂಗ್ ನ್ಯೂಸ್
01-01-21 10:00 pm Mangaluru Correspondent ಕರಾವಳಿ
ಮಂಗಳೂರು, ಜ.1: ನಮ್ಮ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಈ ಬಗ್ಗೆ ಯಾವುದೇ ರೀತಿಯ ನಿಷ್ಪಕ್ಷಪಾತ ತನಿಖೆ ನಡೆಸಲಿ. ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ಮೂರು ದಿನಗಳ ಬಳಿಕ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ತಿಳಿಸಿದ್ದಾರೆ.
ತಿರುಚಿದ ವೀಡಿಯೋ ಒಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಇದೆ ಎಂದು ಆರೋಪಿಸಿ ಎಸ್ಡಿಪಿಐ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಹಿಂದೆ ಎಸ್ಡಿಪಿಐ ಬೆಳವಣಿಗೆಯನ್ನು ಸಹಿಸದೆ ಇರುವವರ ಷಡ್ಯಂತ್ರ ಇದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ರೀತಿಯ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಿರುಚಿದ ವೀಡಿಯೋ ಪೊಲೀಸರಿಗೆ, ಮಾಧ್ಯಮಗಳಿಗೆ ಎಲ್ಲಿಂದ ಬಂದಿದೆ ಎನ್ನುವ ಸತ್ಯ ವಿಚಾರ ಬಹಿರಂಗವಾಗಬೇಕು. ಈ ಹಿಂದೆ ಸಂಘ ಪರಿವಾರದ ಮುಖಂಡರೊಬ್ಬರು ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಇದೇ ಸಂಘಟನೆಯ ವತಿಯಿಂದ ಈ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಅಶ್ರಫ್ ಮಾಚಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟಕದ ಅಧ್ಯಕ್ಷ ಹೈದರ್ ನಿರ್ಸಾಲ್ ಮೊದಲಾದವರು ಉಪಸ್ಥಿತರಿದ್ದರು.
The SDPI has warned of Gherao of Sp's office in Mangalore in regards to Pro-Pakistan Slogan at Ujre, Belthangady, Mangalore for arresting the innocents of SDPI members.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm