Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಪತ್ರ ಬರೆದಿಟ್ಟು ನಾಪತ್ತೆ- ಒಂದು ದಿನದ ಬಳಿಕ ಕೆರೆಯಲ್ಲಿ ಮೃತದೇಹ ಪತ್ತೆ ! 

23-02-26 08:20 pm       Mangaluru Correspondent   ಕರಾವಳಿ

ವಿಟ್ಲ ಬಳಿಯ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಫೆ.22ರಂದು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಆಕೆಯ ಶವವು ಶಾಲೆ ಸಮೀಪದ ಮೂರ್ಕಜೆ ಬಳಿಯ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಬಂಟ್ವಾಳ, ಫೆ.23: ವಿಟ್ಲ ಬಳಿಯ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಫೆ.22ರಂದು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಆಕೆಯ ಶವವು ಶಾಲೆ ಸಮೀಪದ ಮೂರ್ಕಜೆ ಬಳಿಯ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಮೃತ ಬಾಲಕಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬಾಕೆಯಾಗಿದ್ದು ಫೆಬ್ರವರಿ 22 ರಂದು ಗುರುಕುಲದಿಂದ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಮಗಳು ನಾಪತ್ತೆಯಾದ ಮಾಹಿತಿ ದೊರೆಯುತ್ತಿದ್ದಂತೆ ಕುಟುಂಬ ಸದಸ್ಯರು ಆಗಮಿಸಿದ್ದು ಸ್ಥಳೀಯರೊಂದಿಗೆ ಹುಡುಕಾಟ ಆರಂಭಿಸಿದ್ದರು. ಇಂದು ಬೆಳಗಿನ ಜಾವ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು ಪೋಷಕರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರಂಭಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೇನು ಕಾರಣ, ಪತ್ರದಲ್ಲಿ ಯಾವ ವಿಚಾರ ಬರೆದಿಟ್ಟಿದ್ದಳು ಎಂಬ ಬಗ್ಗೆ ತಿಳಿದುಬಂದಿಲ್ಲ‌.