ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm