ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm