ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm