ಬ್ರೇಕಿಂಗ್ ನ್ಯೂಸ್
25-02-26 09:42 am Richard, Headline Karnataka ಕರಾವಳಿ
ಮಂಗಳೂರು, ಫೆ.24: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಮತ್ತು ದುಬಾರಿ ಜೀವನ ಶೈಲಿಯಿಂದ ಬೇಸತ್ತಿರುವ ಐಟಿ ಉದ್ಯೋಗಿಗಳು ಮತ್ತು ಬಹುರಾಷ್ಟ್ರೀಯ ಐಟಿ ಕಂಪನಿಗಳು ಕರ್ನಾಟಕದ ಕರಾವಳಿಯತ್ತ ಮುಖ ಮಾಡುತ್ತಿವೆ. ಕರ್ನಾಟಕ ಸರ್ಕಾರದ 'ಬಿಯಾಂಡ್ ಬೆಂಗಳೂರು' ಯೋಜನೆಯಡಿ ಮಂಗಳೂರು ವೇಗವಾಗಿ ಬೆಳೆಯುತ್ತಿದ್ದು ತಂತ್ರಜ್ಞಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಕಳೆದ 2-3 ವರ್ಷಗಳಲ್ಲಿ ಐಟಿ ವೃತ್ತಿಪರರು ಹಲವಾರು ಕಾರಣಕ್ಕೆ ಮಂಗಳೂರನ್ನು ಆಯ್ಕೆ ಮಾಡುತ್ತಿದ್ದಾರೆ.
ಐಟಿ ಪಾರ್ಕ್ಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಸಬ್ಸಿಡಿ, ರಿಯಾಯ್ತಿಗಳನ್ನು ನೀಡುತ್ತಿದ್ದು ಐಟಿ ಕಂಪನಿಗಳನ್ನು ಆಕರ್ಷಿಸಲು ಕಾರಣವಾಗಿದೆ. ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳೂರನ್ನು ಮುಂದಿನ ಪ್ರಮುಖ ಟೆಕ್ ತಾಣವೆಂದು ಗುರುತಿಸಿ ಪ್ರೋತ್ಸಾಹಿಸುತ್ತಿದ್ದಾರೆ. ಪ್ರವಾಸೋದ್ಯಮ ದೃಷ್ಟಿಯಿಂದ ಮಂಗಳೂರನ್ನು ಗೋವಾ ರೀತಿ ಬೆಳೆಸಬೇಕೆಂದು ಪ್ರೋತ್ಸಾಹ ನೀಡುತ್ತಿರುವುದು ಐಟಿ ಕಂಪನಿಗಳನ್ನು ಆಕರ್ಷಿಸಿದೆ.
ವರ್ಕ್ ಫ್ರಮ್ ಹೋಮ್ ಪ್ರಭಾವ:
ಕೋವಿಡ್ ಸಮಯದಲ್ಲಿ ಮಂಗಳೂರು- ಉಡುಪಿ ಭಾಗದ ಸುಮಾರು 1ರಿಂದ 1.5 ಲಕ್ಷ ವೃತ್ತಿಪರರು ತಮ್ಮ ಊರುಗಳಿಗೆ ಮರಳಿದ್ದರು. ಶಾಂತಿಯುತ ವಾತಾವರಣ ಮತ್ತು ಗುಣಮಟ್ಟದ ಜೀವನದ ಕಾರಣಕ್ಕೆ ಅನೇಕರು ಇಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಕಂಪನಿಗಳು ಮರಳಿ ಕರೆದರೂ ಬೆಂಗಳೂರಿಗೆ ತೆರಳದೆ ಮಂಗಳೂರಿನ ಕಂಪನಿಯನ್ನೇ ಸೇರಿಕೊಳ್ಳುತ್ತಿದ್ದಾರೆ.
ಐಟಿ ಕಂಪನಿಗಳಿಗೆ ಬೆಂಗಳೂರು ಹೋಲಿಸಿದರೆ ನಿರ್ವಹಣಾ ವೆಚ್ಚವೂ ಕಡಿಮೆ ಇರುವುದರಿಂದ, ಕಳೆದ ಎರಡು ವರ್ಷಗಳಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಮಂಗಳೂರಿನಲ್ಲಿ ಕಾರ್ಯಾಚರಣೆ ಆರಂಭಿಸಿವೆ. ಇದರಿಂದಾಗಿ 2023ರಲ್ಲಿ 15,000 ದಷ್ಟಿದ್ದ ಐಟಿ ಉದ್ಯೋಗಿಗಳ ಸಂಖ್ಯೆ ಇಂದು 30 ಸಾವಿರಕ್ಕೆ ಏರಿಕೆಯಾಗಿದೆ. ಬೆಂಗಳೂರಿನಿಂದ ಹೊರಗೆ ಆರಂಭವಾಗುವ ಕಂಪನಿಗಳಿಗೆ ಬಾಡಿಗೆ ಸಬ್ಸಿಡಿ ಸೇರಿದಂತೆ ಅನೇಕ ರಿಯಾಯಿತಿಗಳು ಸರ್ಕಾರದ ಕಡೆಯಿಂದ ಸಿಗುತ್ತಿವೆ. ಇದರ ಫಲವಾಗಿ 2035ರ ವೇಳೆಗೆ ಮಂಗಳೂರು ಸಂಪೂರ್ಣ ಬದಲಾಗಲಿದ್ದು, ರಾಜ್ಯದ ಎರಡನೇ ಅತಿ ದೊಡ್ಡ ಮತ್ತು ಐಟಿ ವೃತ್ತಿಪರರ ನೆಚ್ಚಿನ ತಾಣವಾಗಿ ಬದಲಾಗಲಿದೆ.
ಇದಲ್ಲದೆ, ಮಂಗಳೂರು ಮತ್ತು ಕೇರಳದ ನಡುವಿನ ಸಾಂಸ್ಕೃತಿಕ ಸಾಮ್ಯತೆ ಮತ್ತು ರಸ್ತೆ- ರೈಲಿನ ಹತ್ತಿರದ ಸಂಪರ್ಕಗಳು ಹೆಚ್ಚಿನ ಉದ್ಯೋಗಿಗಳನ್ನು ಆಕರ್ಷಿಸಲು ಪೂರಕವಾಗಿದೆ. ಹೀಗಾಗಿ ನೆರೆಯ ಕೇರಳದ ವೃತ್ತಿಪರರಿಗೂ ಬೆಂಗಳೂರು ಬದಲು ಮಂಗಳೂರು ನೆಚ್ಚಿನ ತಾಣವಾಗಲಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm