ಬ್ರೇಕಿಂಗ್ ನ್ಯೂಸ್
27-02-26 08:36 pm HK News Desk ಕರಾವಳಿ
ಉಡುಪಿ, ಫೆ.27: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳಗ್ಗೆಯಿಂದಲೇ ಉಡುಪಿಗೆ ಭೇಟಿ ನೀಡಿ, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹಠಾತ್ ಪರಿಶೀಲನೆ ನಡೆಸಿದರು.
ಮೊದಲು ನಿಟ್ಟೂರಿನಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಯನ್ನು ಕಂಡು ನಗರಸಭೆಯ ಪೌರಾಯುಕ್ತ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಘಟಕದ ನಿರ್ವಹಣೆಗೆ ಪ್ರತಿ ತಿಂಗಳು 3 ಲಕ್ಷ ರೂಪಾಯಿ ಪಡೆಯುತ್ತೀರಿ, ತ್ಯಾಜ್ಯ ನೀರನ್ನು ಸಂಸ್ಕರಿಸದೇ ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದೀರಿ ಯಾಕೆ. ಆ ದುಡ್ಡಿನಲ್ಲಿ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಕ್ಕಾಗಲ್ವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಪರಿಸರ ಇಲಾಖೆಯ ಅಧಿಕಾರಿಗಳನ್ನೂ ತರಾಟೆಗೆತ್ತಿಕೊಂಡರು.
ಅಲ್ಲಿಂದ ನೇರವಾಗಿ ಮಲ್ಪೆ ಬಂದರಿಗೆ ಭೇಟಿ ನೀಡಿದ ಅವರು, ಅಲ್ಲಿನ ಮಾಲಿನ್ಯ ಹಾಗೂ ಸುತ್ತಮುತ್ತ ಹರಿಯುತ್ತಿರುವ ತ್ಯಾಜ್ಯ ನೀರು ಮತ್ತು ಹರಡಿರುವ ದುರ್ವಾಸನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಬನ್ನಂಜೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಕ್ಯಾಂಟೀನ್, ಅಡುಗೆ ಕೋಣೆಗೆ ತೆರಳಿ ಸ್ವಚ್ಛತೆಯನ್ನು ಪರಿಶೀಲಿಸಿದರು. ಈ ವೇಳೆ ಅಲ್ಲಿನ ಸ್ವಚ್ಛತಾ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ, ತಮಗೆ ಇಎಸ್ಐ ಸೇರಿದಂತೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ದೂರಿದರು.
ಈ ವೇಳೆ, ಗುತ್ತಿಗೆದಾರರು ಯಾರೆಂದು ಕೇಳಿ ಸೌಲಭ್ಯ ನೀಡದ ಬಗ್ಗೆ ಪ್ರಶ್ನೆ ಮಾಡಿದ ನ್ಯಾಯಮೂರ್ತಿ, ಕಾರ್ಮಿಕರಿಗೆ ಕೂಡಲೇ ಇಎಸ್ಐ ಕಾರ್ಡ್ ನೀಡುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕೆ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು. ಇಂತಹ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ನ್ಯಾಯಮೂರ್ತಿ ವೀರಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
Justice B. Veerappa, the Upa Lokayukta, paid a surprise visit to Udupi on Friday morning and carried out sudden inspections at several government offices and facilities.He first visited the sewage treatment plant at Nitte, where he expressed strong displeasure over the poor maintenance. Justice Veerappa severely reprimanded the Municipal Commissioner and other concerned officials, questioning why untreated sewage was being discharged directly into the sea despite collecting ₹3 lakh every month for the plant’s maintenance.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm