ಬ್ರೇಕಿಂಗ್ ನ್ಯೂಸ್
04-03-26 10:54 am HK News Staffer ಕರಾವಳಿ
ಉಡುಪಿ, ಮಾರ್ಚ್ 04: ಪ್ರೇಮ ಪ್ರಕರಣದ ರಾಜಿ ವೇಳೆ ಸ್ಥಳೀಯ ಮೀನುಗಾರರ ಮುಖಂಡನಿಗೆ ಚಾಕು ಇರಿತ ನಡೆದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಪ್ರಾಣಾಪಾಯದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಲ್ಪೆ ಯುವಕ ಮತ್ತು ಪಡುಬಿದ್ರಿ–ಪಲಿಮಾರು ಭಾಗದ ಯುವತಿಯ ಪ್ರೇಮ ಸಂಬಂಧದ ಕುರಿತು ಮಾತುಕತೆಗೆ ಇಬ್ಬರು ಕಡೆಯವರೂ ಸೇರಿದ್ದರು. ಈ ವೇಳೆ ಉದ್ವಿಗ್ನತೆ ಉಂಟಾಗಿ, ಯುವತಿಯ ಕಡೆಯವರಿಂದ ಮಂಜು ಕೊಳ ಮೇಲೆ ಚಾಕು ಇರಿತ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಯಗೊಂಡ ಮಂಜು ಕೊಳ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗಳಿಲ್ಲದೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಘಟನೆಯ ನಂತರ ಸ್ಥಳೀಯರು ಆರೋಪಿಗಳನ್ನು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿದೆ. ಪ್ರಕರಣಕ್ಕೆ ಯಾವುದೇ ಕೋಮು ಹಿನ್ನೆಲೆ ಇಲ್ಲ. ಸಾರ್ವಜನಿಕರು ವದಂತಿಗಳನ್ನು ಹರಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಪ್ರಸ್ತುತ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm