ಬ್ರೇಕಿಂಗ್ ನ್ಯೂಸ್
05-03-26 12:42 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 4: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಸ್ಥಳೀಯರು ಅಚ್ಚರಿಗೆ ಒಳಗಾಗಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯ ಶಾಸಕ ಸ್ಪೀಕರ್ ಯು.ಟಿ. ಖಾದರ್ ತನಿಖೆಗೆ ಸೂಚಿಸಿದ್ದಾರೆ.
ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಬಳಿಕ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿರುವುದು ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್ಗಳೆಂದು ಸ್ಥಳೀಯರು ತಿಳಿಸಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಅವರು ಮಾಹಿತಿ ನೀಡಿದ್ದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್ಗಳು ನದಿ ಬದಿಯಲ್ಲಿ ಚದುರಿ ಬಿದ್ದಿದ್ದವು. ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಪ್ರತಿಕ್ರಿಯಿಸಿ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ನದಿಗೆ ತಲುಪಿದ್ದು ಹೇಗೆ ಎನ್ನುವುದು ಅಚ್ಚರಿಯಾಗಿದೆ. ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಆಧಾರ್ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದಿದ್ದಾರೆ.
ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm