ಬ್ರೇಕಿಂಗ್ ನ್ಯೂಸ್
05-03-26 02:34 pm HK News Staffer ಕರಾವಳಿ
ಉಳ್ಳಾಲ, ಮಾ.5: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.
ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.


ಅರಣ್ಯಾಧಿಕಾರಿ ಮೆಹಬೂಬ್ ಸಾಬ್(35) ಅವರು ತನ್ನ ಪತ್ನಿ ಫರ್ಝಾನ ಮೆಹಬೂಬ್ ಮತ್ತು ಪುಟ್ಟ ಮಗುವಿನೊಂದಿಗೆ ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳುಗಳಿಂದ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯಾಹ್ನ ಮೆಹಬೂಬ್ ಅವರು ಕುಟುಂಬದೊಂದಿಗೆ ತನ್ನ ಊರು ಕೊಪ್ಪಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಒಂಬತ್ತು ಗಂಟೆ ವೇಳೆಗೆ ಮೆಹಬೂಬ್ ಅವರು ತನ್ನ ಕುಟುಂಬ ಸಮೇತ ಕಾಪಿಕಾಡಿನ ಮನೆಗೆ ವಾಪಸಾದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನ ಜಾಲಾಡಿದ್ದು, ಲಾಕರ್ ಗಳಲ್ಲಿದ್ದ 181 ಗ್ರಾಂ ಚಿನ್ನ, ಮಗುವಿನ ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದ ಹತ್ತೂವರೆ ಲಕ್ಷ ರೂಪಾಯಿ ನಗದನ್ನ ದೋಚಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಕಾಪಿಕಾಡು ಪ್ರದೇಶದಲ್ಲಿ ಸಾಕಷ್ಟು ಮನೆಗಳಿದ್ದರೂ ಕಳ್ಳತನ ಯಾವಾಗ ನಡೆದಿದೆಯೆಂದು ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಕಳ್ಳತನ ನಡೆದ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲದೆ ಪೊಲೀಸರಿಗೆ ಪ್ರಕರಣದ ತನಿಖೆ ಸವಾಲಾಗಿ ಪರಿಣಮಿಸಿದೆ.
ಕೆಲ ವರುಷಗಳ ಹಿಂದಷ್ಟೆ ಅರಣ್ಯಾಧಿಕಾರಿ ನೆಲೆಸಿರುವ ಪಕ್ಕದ ಮನೆಯಲ್ಲೂ ಮನೆ ಕಳ್ಳತನ ನಡೆದಿತ್ತು. ಅಂದು ಕೂಡ ಮನೆ ಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಕಳ್ಳತನ ನಡೆಸಿದ್ದಲ್ಲದೆ, ಅಡುಗೆ ಕೋಣೆಯಲ್ಲಿದ್ದ ಊಟವನ್ನೂ ಉಂಡು ಹೋಗಿದ್ದರು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm