ಬ್ರೇಕಿಂಗ್ ನ್ಯೂಸ್
05-03-26 07:38 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 5: ನಗರದ ಬದ್ರಿಯಾ ರಸ್ತೆಯ ಲಾಡ್ಜ್ ಒಂದರಲ್ಲಿ ಕುಳಿತು ನಿಷೇಧಿತ ಮಾದಕ ದ್ರವ್ಯ MDMA ಮತ್ತು ಹೈಡ್ರೋ ವೀಡ್ ಗಾಂಜಾವನ್ನು ಮಂಗಳೂರು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರೀನ್ ಪಾರ್ಕ್ ಮೈದಾನ ಬಂದರು ಬಳಿಯಲ್ಲಿ ನಿಷೇಧಿತ ಮಾದಕ ವಸ್ತು ಹೈಡ್ರೋ ವೀಡ್ ಗಾಂಜಾ ಮತ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕೋಟೇಶ್ವರ, ಹಾಲಿ ಪಾಂಡೇಶ್ವರ ನಿವಾಸಿಗಳಾದ ಮೊಹಮ್ಮದ್ ಸಯ್ಯದ್ ಆಫ್ರೀದಿ (26),
ಅಹಮ್ಮದ್ ಅಲಿ ಅರ್ಷಾನ್ (22), ಬಲ್ಮಠ ನಿವಾಸಿ ಮಕ್ಸೂದ್ ಸಾಗ್ (23), ಕೊಟ್ಟಾಯಂ ಮೂಲದ ಫೆಲಿಕ್ಸ್ ಪಿ. ಜೋಸೆಫ್ (20), ಕಂಕನಾಡಿ ನಿವಾಸಿ ಎಡಲ್ ರೋಚ್ (33), ಮಲ್ಲಿಕಟ್ಟೆ ನಿವಾಸಿ ಆರೋನ್ ವಿಶಾಲ್ ಲಾಸ್ರಾದೋ (18) ಬಂಧಿತರು. ಒಂದು ಪ್ರಕರಣದಲ್ಲಿ ಆರೋಪಿಗಳಿಂದ MDMA 53.87 ಗ್ರಾಂ, ಹೈಡ್ರೋವಿಡ್ ಗಾಂಜಾ - 103. 20 ಗ್ರಾಂ ಮತ್ತು MG Hector ವಾಹನ ಹಾಗೂ ಇನ್ನೊಂದು ಪ್ರಕರಣದಲ್ಲಿ ಹೈಡ್ರೋವಿಡ್ ಗಾಂಜಾ - 60 ಗ್ರಾಂ, ಗಾಂಜಾ- 1 ಕೆಜಿ155 ಗ್ರಾಂ ಮತ್ತು Maruti Swift ಕಾರು ವಶಕ್ಕೆ ಪಡೆಯಲಾಗಿದೆ.
ಮುಂಬೈ ನಿವಾಸಿಯಾದ ಸಂದೀಪ್ ಶೆಟ್ಟಿ ದುಬೈನಲ್ಲಿ ಹೋಟೆಲ್ ಒಂದರಲ್ಲಿ ಮ್ಯಾನೇಜರ್ ಆಗಿದ್ದು, ನಿಷೇಧಿತ ಮಾದಕ ವಸ್ತುವಾದ ಹೈಡ್ರೋ ವೀಡ್ ಗಾಂಜಾವನ್ನು ಬೆಂಗಳೂರಿಗೆ ವಿಮಾನದ ಮುಖಾಂತರ ಸಾಗಿಸುತ್ತಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ ಬೇರೆಡೆ ಸಾಗಿಸುವ ಕೆಲಸವನ್ನು ಎಡಲ್ ರೋಚ್ ಮಾಡುತ್ತಿದ್ದನು. ಎಡಲ್ ರೋಚ್ ಮತ್ತು ಆರೋನ್ ವಿಶಾಲ್ ಲಾಸ್ರಾದೋ ಅವರು ಮಕ್ಸೂದ್ ಸಾಗ್ ಎಂಬಾತನ ಮೂಲಕ ಮೊಹಮ್ಮದ್ ಸಯ್ಯದ್ ಆಫ್ರೀದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಎಂಬವರಿಗೆ ಬೆಂಗಳೂರಿನಲ್ಲಿ ಮಾದಕ ವಸ್ತುವನ್ನು ಪೂರೈಸಿರುತ್ತಾರೆ.
ಮೊಹಮ್ಮದ್ ಸಯ್ಯದ್ ಆಫ್ರಿದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಬೆಂಗಳೂರಿನಿಂದ ಗಾಂಜಾ, ಹೈಡ್ರೋವಿಡ್ ಮತ್ತು ಎಂ.ಡಿ.ಎಂ.ಎ ಅನ್ನು ತಮ್ಮ ಎಂ.ಜಿ ಹೆಕ್ಟರ್ ವಾಹನದಲ್ಲಿ ತೆಗೆದುಕೊಂಡು ಬಂದಿದ್ದರು. ಇವರು ಬಂದರಿನ ಕ್ಲಾಸಿಕ್ ಕಂಫರ್ಟ್ ಲಾಡ್ಜ್ ನಲ್ಲಿ ಇರುವಾಗ ಬಂಧನ ಮಾಡಲಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm