ಬ್ರೇಕಿಂಗ್ ನ್ಯೂಸ್
05-03-26 07:38 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 5: ನಗರದ ಬದ್ರಿಯಾ ರಸ್ತೆಯ ಲಾಡ್ಜ್ ಒಂದರಲ್ಲಿ ಕುಳಿತು ನಿಷೇಧಿತ ಮಾದಕ ದ್ರವ್ಯ MDMA ಮತ್ತು ಹೈಡ್ರೋ ವೀಡ್ ಗಾಂಜಾವನ್ನು ಮಂಗಳೂರು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರೀನ್ ಪಾರ್ಕ್ ಮೈದಾನ ಬಂದರು ಬಳಿಯಲ್ಲಿ ನಿಷೇಧಿತ ಮಾದಕ ವಸ್ತು ಹೈಡ್ರೋ ವೀಡ್ ಗಾಂಜಾ ಮತ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕೋಟೇಶ್ವರ, ಹಾಲಿ ಪಾಂಡೇಶ್ವರ ನಿವಾಸಿಗಳಾದ ಮೊಹಮ್ಮದ್ ಸಯ್ಯದ್ ಆಫ್ರೀದಿ (26),
ಅಹಮ್ಮದ್ ಅಲಿ ಅರ್ಷಾನ್ (22), ಬಲ್ಮಠ ನಿವಾಸಿ ಮಕ್ಸೂದ್ ಸಾಗ್ (23), ಕೊಟ್ಟಾಯಂ ಮೂಲದ ಫೆಲಿಕ್ಸ್ ಪಿ. ಜೋಸೆಫ್ (20), ಕಂಕನಾಡಿ ನಿವಾಸಿ ಎಡಲ್ ರೋಚ್ (33), ಮಲ್ಲಿಕಟ್ಟೆ ನಿವಾಸಿ ಆರೋನ್ ವಿಶಾಲ್ ಲಾಸ್ರಾದೋ (18) ಬಂಧಿತರು. ಒಂದು ಪ್ರಕರಣದಲ್ಲಿ ಆರೋಪಿಗಳಿಂದ MDMA 53.87 ಗ್ರಾಂ, ಹೈಡ್ರೋವಿಡ್ ಗಾಂಜಾ - 103. 20 ಗ್ರಾಂ ಮತ್ತು MG Hector ವಾಹನ ಹಾಗೂ ಇನ್ನೊಂದು ಪ್ರಕರಣದಲ್ಲಿ ಹೈಡ್ರೋವಿಡ್ ಗಾಂಜಾ - 60 ಗ್ರಾಂ, ಗಾಂಜಾ- 1 ಕೆಜಿ155 ಗ್ರಾಂ ಮತ್ತು Maruti Swift ಕಾರು ವಶಕ್ಕೆ ಪಡೆಯಲಾಗಿದೆ.
ಮುಂಬೈ ನಿವಾಸಿಯಾದ ಸಂದೀಪ್ ಶೆಟ್ಟಿ ದುಬೈನಲ್ಲಿ ಹೋಟೆಲ್ ಒಂದರಲ್ಲಿ ಮ್ಯಾನೇಜರ್ ಆಗಿದ್ದು, ನಿಷೇಧಿತ ಮಾದಕ ವಸ್ತುವಾದ ಹೈಡ್ರೋ ವೀಡ್ ಗಾಂಜಾವನ್ನು ಬೆಂಗಳೂರಿಗೆ ವಿಮಾನದ ಮುಖಾಂತರ ಸಾಗಿಸುತ್ತಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ ಬೇರೆಡೆ ಸಾಗಿಸುವ ಕೆಲಸವನ್ನು ಎಡಲ್ ರೋಚ್ ಮಾಡುತ್ತಿದ್ದನು. ಎಡಲ್ ರೋಚ್ ಮತ್ತು ಆರೋನ್ ವಿಶಾಲ್ ಲಾಸ್ರಾದೋ ಅವರು ಮಕ್ಸೂದ್ ಸಾಗ್ ಎಂಬಾತನ ಮೂಲಕ ಮೊಹಮ್ಮದ್ ಸಯ್ಯದ್ ಆಫ್ರೀದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಎಂಬವರಿಗೆ ಬೆಂಗಳೂರಿನಲ್ಲಿ ಮಾದಕ ವಸ್ತುವನ್ನು ಪೂರೈಸಿರುತ್ತಾರೆ.
ಮೊಹಮ್ಮದ್ ಸಯ್ಯದ್ ಆಫ್ರಿದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಬೆಂಗಳೂರಿನಿಂದ ಗಾಂಜಾ, ಹೈಡ್ರೋವಿಡ್ ಮತ್ತು ಎಂ.ಡಿ.ಎಂ.ಎ ಅನ್ನು ತಮ್ಮ ಎಂ.ಜಿ ಹೆಕ್ಟರ್ ವಾಹನದಲ್ಲಿ ತೆಗೆದುಕೊಂಡು ಬಂದಿದ್ದರು. ಇವರು ಬಂದರಿನ ಕ್ಲಾಸಿಕ್ ಕಂಫರ್ಟ್ ಲಾಡ್ಜ್ ನಲ್ಲಿ ಇರುವಾಗ ಬಂಧನ ಮಾಡಲಾಗಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm