ಬ್ರೇಕಿಂಗ್ ನ್ಯೂಸ್
06-03-26 07:01 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026–27ನೇ ಸಾಲಿನ ಬಜೆಟ್ನಲ್ಲಿ ಮೀನುಗಾರಿಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದೆ. ಮೀನುಗಾರರ ಆರ್ಥಿಕ ಸ್ಥಿತಿ ಬಲಪಡಿಸುವುದು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.
ಮೀನುಗಾರರಿಗೆ ಸಲಕರಣೆ ಕಿಟ್ ಮೌಲ್ಯ ದ್ವಿಗುಣ:
ಮೀನುಗಾರರಿಗೆ ನೀಡುತ್ತಿದ್ದ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದರಿಂದ ಮೀನುಗಾರರು ಉತ್ತಮ ಗುಣಮಟ್ಟದ ಉಪಕರಣಗಳನ್ನು ಪಡೆದು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಲು ನೆರವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಸಮುದ್ರ ಕೃಷಿಗೆ ಸಂಶೋಧನಾ ಕೇಂದ್ರ:
ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಜೈವಿಕ ತಂತ್ರಜ್ಞಾನ, ಸಮುದ್ರ ಕೃಷಿ ಮತ್ತು ನವೀನ ತಂತ್ರಜ್ಞಾನಗಳ ಸಂಶೋಧನೆಗೆ ಈ ಕೇಂದ್ರ ವೇದಿಕೆಯಾಗಲಿದೆ.
ಮತ್ಸ್ಯದರ್ಶಿನಿ ಮಾರುಕಟ್ಟೆಗಳ ಸ್ಥಾಪನೆ:
ಮೀನು ಆಹಾರ ಬಳಕೆಯನ್ನು ಉತ್ತೇಜಿಸಲು ಹಾಗೂ ಗುಣಮಟ್ಟದ ಮೀನು ಉತ್ಪನ್ನಗಳನ್ನು ಲಭ್ಯವಾಗಿಸಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
ಸುಸಜ್ಜಿತ ಮೀನು ಮಾರುಕಟ್ಟೆ ಅಭಿವೃದ್ಧಿ:
ಮೀನು ಮಾರಾಟ ವ್ಯವಸ್ಥೆಯನ್ನು ಬಲಪಡಿಸಲು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಆಧುನಿಕ ಮೀನು ಮಾರುಕಟ್ಟೆಗಳನ್ನು ನಿರ್ಮಿಸಲಾಗುವುದು. ಇದರಿಂದ ಮೀನುಗಾರರಿಗೆ ಉತ್ತಮ ಮಾರಾಟ ಅವಕಾಶ ಸಿಗಲಿದೆ. ಅಲ್ಲದೆ, ಮೀನುಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲು ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗೆ 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
ಒಳನಾಡು ಮೀನುಗಾರಿಕೆಗೆ ವಿಶೇಷ ಒತ್ತು:
ಗ್ರಾಮೀಣ ಪ್ರದೇಶಗಳ ಉದ್ಯೋಗ ಸೃಷ್ಟಿ ಮತ್ತು ಆಹಾರ ಭದ್ರತೆಗಾಗಿ ಒಳನಾಡು ಮೀನುಗಾರಿಕೆಯನ್ನು ಉತ್ತೇಜಿಸಲಾಗುವುದು. ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ಆಧುನಿಕ ತಂತ್ರಜ್ಞಾನ ತರಬೇತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಭರವಸೆ ನೀಡಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm