ಬ್ರೇಕಿಂಗ್ ನ್ಯೂಸ್
09-03-26 12:50 pm HK News Staffer ಕರಾವಳಿ
ಭಟ್ಕಳ, ಮಾರ್ಚ್ 9: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪಿದ ನಂತರ ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗುವ ಸೂಚನೆ ಲಭಿಸಿದೆ. ನಿನ್ನೆ ಭಟ್ಕಳದಲ್ಲಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಹಿಂದುತ್ವದ ಪರ ಪ್ರಖರ ಭಾಷಣ ಮಾಡಿ ಗಮನ ಸೆಳೆದಿದ್ದಾರೆ.
ನಮ್ಮ ಇತಿಹಾಸದಲ್ಲಿ ಆಗಿಹೋದ ಶೇಕಡಾ 90ರಷ್ಟು ಋಷಿಗಳು ಬ್ರಾಹ್ಮಣರಲ್ಲ. ಶ್ರೇಷ್ಠ ಸಾಧನೆಗೈದ ವಾಲ್ಮೀಕಿ, ವಿಶ್ವಾಮಿತ್ರರೂ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಜಾತಿಗೆ ಎಂದಿಗೂ ಬೆಲೆ ಇರಲಿಲ್ಲ, ಯೋಗ್ಯತೆಗೆ ಮಾತ್ರ ಬೆಲೆಯಿತ್ತು. ಇಂದು ಜಾತಿಗೆ ಬೆಲೆ ಕೊಟ್ಟಿದ್ದು ನಮ್ಮಂತಹ ಬುದ್ಧಿವಂತರು. ಇತಿಹಾಸ ಓದಿದರೆ ನಮ್ಮ ಹಿಂದಿನ ಸತ್ಯ ತಿಳಿಯುತ್ತದೆ ಎಂದರು.
ಜಾತ್ಯತೀತತೆ ಎಂದರೆ ಅದು ಹಿಂದುತ್ವ. ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲು ಅವಕಾಶ ನೀಡಿದ್ದೇವೆ ಎಂದರೆ ನಮಗಿಂತ ದೊಡ್ಡ ಜಾತ್ಯತೀತರು ಯಾರಿದ್ದಾರೆ? ತಾಕತ್ತಿದ್ದರೆ ಬಾಂಗ್ಲಾದೇಶಕ್ಕೆ ಹೋಗಿ ಜಾತ್ಯತೀತತೆಯ ಪಾಠ ಮಾಡಿ ಎಂದು ಸವಾಲು ಹಾಕಿದರು. ನಮ್ಮನ್ನು ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಸೋಲಿಸಿಲ್ಲ. ಹಿಂದೂಗಳನ್ನು ಸೋಲಿಸಿದ್ದು ನಮ್ಮವರೇ ಆದ ಜಯಚಂದ ಮತ್ತು ಮಲ್ಲಪ್ಪ ಶೆಟ್ಟಿಯಂತಹ ದ್ರೋಹಿಗಳು. ನಾವು ಒಂದಾಗದಿದ್ದರೆ ನಮ್ಮ ಪರಿಸ್ಥಿತಿ ‘ಗೋವಿಂದ ಗೋವಿಂದ’ ಆಗಲಿದೆ.
“ಆರ್.ಎಸ್.ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ಹುಲಿ-ಸಿಂಹವನ್ನು ಯಾರೂ ದೇವರಿಗೆ ಬಲಿ ಕೊಡಲ್ಲ, ಕುರಿಯನ್ನಷ್ಟೇ ಬಲಿ ಕೊಡೋದು. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು, ಮುಗಿಸಲು ಸಾಧ್ಯವಿಲ್ಲ ಎಂದು ತಮ್ಮ ಶೈಲಿಯಲ್ಲಿಯೇ ಗುಡುಗಿದರು. ಹಿಂದೂ ಧರ್ಮವು ಇಂದು ಜಾತಿ-ಜಾತಿಯಲ್ಲಿ ಬಿದ್ದು ಹೊರಳಾಡುತ್ತಿದೆ. ನಮಗೆ ಮುಸ್ಲಿಮರು ಅಥವಾ ಕ್ರೈಸ್ತರಿಂದ ಅಪಾಯ ಬಂದಿಲ್ಲ, ಬದಲಾಗಿ ನಮ್ಮೊಳಗಿನವರಿಂದಲೇ ನಮಗೆ ಹೆಚ್ಚಿನ ಅಪಾಯ ಎದುರಾಗಿದ್ದು.
ಇಂದು ಆಫ್ರಿಕಾದಲ್ಲಿ ನಮಗಿಂತ ಸುಂದರವಾಗಿ ಗಣೇಶ ಹಬ್ಬ ಆಚರಿಸುತ್ತಾರೆ. ಚೀನಾದ ಗ್ರಾಮೀಣ ಪ್ರದೇಶಗಳಲ್ಲಿ ಭಾರತೀಯರಿಗೆ ಅಪಾರ ಗೌರವವಿದೆ. ಜಗತ್ತು ನಮ್ಮತ್ತ ನೋಡುತ್ತಿದೆ, ನಾವಿಂದು ಎದ್ದು ನಿಲ್ಲಬೇಕಿದೆ ಎಂದು ಜನರನ್ನು ಅನಂತ ಕುಮಾರ್ ಹೆಗಡೆ ಒತ್ತಾಯಿಸಿದರು. ನಮ್ಮ ಯಾವುದೇ ಧರ್ಮಗ್ರಂಥಗಳಲ್ಲಿ ಜಾತಿ ವ್ಯವಸ್ಥೆಯ ಉಲ್ಲೇಖವಿಲ್ಲ. ನದಿ ಹರಿಯುವಾಗ ಕೊಳಕು ಸೇರಿಕೊಂಡಂತೆ, ಕಾಲಕ್ರಮೇಣ ಜಾತಿ ಎಂಬ ಕೊಳಕು ನಮ್ಮಲ್ಲಿ ಸೇರಿಕೊಂಡಿದೆ. ಅದನ್ನು ಸ್ವಚ್ಛಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಪ್ರಸ್ತುತ ಕಾಲಘಟ್ಟದಲ್ಲಿ ಕೇವಲ ತಮ್ಮ ಜಾತಿಯವರನ್ನು ಮಾತ್ರ ಗೌರವಿಸುವ 'ಜಾತಿ ಸಮ್ಮೇಳನಗಳು' ಫ್ಯಾಶನ್ ಆಗಿರುವುದು ಸಮಾಜದ ಏಕತೆಗೆ ಮಾರಕ ಎಂದು ಅವರು ಅಭಿಪ್ರಾಯಪಟ್ಟರು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm