ಬ್ರೇಕಿಂಗ್ ನ್ಯೂಸ್
09-03-26 09:52 pm HK News Staffer ಕರಾವಳಿ
ಉಳ್ಳಾಲ, ಮಾ.09: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು ನೀರು ಕುಡಿಸಿದ್ದು, ದಣಿವಾರಿಸಿಕೊಂಡ ಅಳಿಲು ಪೊಲೀಸಪ್ಪನ ಜೊತೆ ಸ್ನೇಹ ಬೆಳೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ರಮೇಶ್ ಅಸಂಗಿ ಭಾನುವಾರ ಮಂಗಳೂರು ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅವರ ಬೈಕಿನ ಚಕ್ರದ ಮೇಲೆ ದಣಿವಿನಿಂದ ಓಡಾಡುತ್ತಿದ್ದ ಅಳಿಲನ್ನ ಗಮನಿಸಿದ್ದಾರೆ. ತಕ್ಷಣ ತನ್ನ ನೀರಿನ ಬಾಟಲಿಯ ಮುಚ್ಚಳಕ್ಕೆ ನೀರು ಸುರಿದು ಅಳಿಲಿಗೆ ಕುಡಿಸಲು ಪ್ರಯತ್ನಿಸಿದ್ದಾರೆ. ಆರಂಭದಲ್ಲಿ ಅಳಿಲು ಹತ್ತಿರ ಬರಲು ನಿರಾಕರಿಸಿದ್ದು ಬಳಿಕ ರಮೇಶ್ ಅವರ ಕಾಳಜಿಗೆ ಮನಸೋತು ನೀರನ್ನು ಕುಡಿದು ದಣಿವು ನೀಗಿಸಿಕೊಂಡಿದೆ. ದಣಿವನ್ನ ನೀಗಿಸಿಕೊಂಡ ಅಳಿಲು ಮತ್ತೆಲ್ಲೂ ಹೋಗದೆ ರಮೇಶ್ ಅಸಂಗಿ ಅವರ ಜೊತೆಯಲ್ಲೇ ಬಂದಿದ್ದು, ಆ ಅಳಿಲನ್ನ ರಮೇಶ್ ಅವರು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಅಳಿಲಿಗೆ ನೀರುಣಿಸುವ ದೃಶ್ಯವನ್ನು ಮಹೇಶ್ ಅವರು ತಮ್ಮ ಮೊಬೈಲಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಬಿರು ಬಿಸಿಲಿಗೆ ಮೈಯೊಡ್ಡಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ಮೂಕ ಪ್ರಾಣಿಯ ಮೇಲೆ ತೋರಿದ ಕಾಳಜಿಗೆ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದಲ್ಲದೆ, ಮನುಷ್ಯ ಮತ್ತು ಮೂಕ ಪ್ರಾಣಿಯ ನಡುವಿನ ನಿಷ್ಕಲ್ಮಶ ಪ್ರೀತಿಗೂ ಜನರು ಮನಸೋತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm