ಬ್ರೇಕಿಂಗ್ ನ್ಯೂಸ್
09-03-26 09:52 pm HK News Staffer ಕರಾವಳಿ
ಉಳ್ಳಾಲ, ಮಾ.09: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು ನೀರು ಕುಡಿಸಿದ್ದು, ದಣಿವಾರಿಸಿಕೊಂಡ ಅಳಿಲು ಪೊಲೀಸಪ್ಪನ ಜೊತೆ ಸ್ನೇಹ ಬೆಳೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ರಮೇಶ್ ಅಸಂಗಿ ಭಾನುವಾರ ಮಂಗಳೂರು ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅವರ ಬೈಕಿನ ಚಕ್ರದ ಮೇಲೆ ದಣಿವಿನಿಂದ ಓಡಾಡುತ್ತಿದ್ದ ಅಳಿಲನ್ನ ಗಮನಿಸಿದ್ದಾರೆ. ತಕ್ಷಣ ತನ್ನ ನೀರಿನ ಬಾಟಲಿಯ ಮುಚ್ಚಳಕ್ಕೆ ನೀರು ಸುರಿದು ಅಳಿಲಿಗೆ ಕುಡಿಸಲು ಪ್ರಯತ್ನಿಸಿದ್ದಾರೆ. ಆರಂಭದಲ್ಲಿ ಅಳಿಲು ಹತ್ತಿರ ಬರಲು ನಿರಾಕರಿಸಿದ್ದು ಬಳಿಕ ರಮೇಶ್ ಅವರ ಕಾಳಜಿಗೆ ಮನಸೋತು ನೀರನ್ನು ಕುಡಿದು ದಣಿವು ನೀಗಿಸಿಕೊಂಡಿದೆ. ದಣಿವನ್ನ ನೀಗಿಸಿಕೊಂಡ ಅಳಿಲು ಮತ್ತೆಲ್ಲೂ ಹೋಗದೆ ರಮೇಶ್ ಅಸಂಗಿ ಅವರ ಜೊತೆಯಲ್ಲೇ ಬಂದಿದ್ದು, ಆ ಅಳಿಲನ್ನ ರಮೇಶ್ ಅವರು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಅಳಿಲಿಗೆ ನೀರುಣಿಸುವ ದೃಶ್ಯವನ್ನು ಮಹೇಶ್ ಅವರು ತಮ್ಮ ಮೊಬೈಲಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಬಿರು ಬಿಸಿಲಿಗೆ ಮೈಯೊಡ್ಡಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ಮೂಕ ಪ್ರಾಣಿಯ ಮೇಲೆ ತೋರಿದ ಕಾಳಜಿಗೆ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದಲ್ಲದೆ, ಮನುಷ್ಯ ಮತ್ತು ಮೂಕ ಪ್ರಾಣಿಯ ನಡುವಿನ ನಿಷ್ಕಲ್ಮಶ ಪ್ರೀತಿಗೂ ಜನರು ಮನಸೋತಿದ್ದಾರೆ.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm