ಬ್ರೇಕಿಂಗ್ ನ್ಯೂಸ್
11-03-26 06:26 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೂರೈಕೆ ಕೊರತೆಯಿಂದಾಗಿ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದಲ್ಲಿ ಪ್ರತಿ ದಿನ ಬೆಳಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನದ ಆಡಳಿತ ಈ ಕ್ರಮ ಕೈಗೊಂಡಿದೆ.
ದೇವಸ್ಥಾನದಲ್ಲಿ ಸದ್ಯಕ್ಕೆ ಕೇವಲ ಮೂರು ದಿನಗಳಿಗೆ ಆಗುವಷ್ಟು ಮಾತ್ರ ಅನಿಲ ದಾಸ್ತಾನು ಲಭ್ಯವಿದೆ. ಅಷ್ಟರೊಳಗೆ ಪೂರೈಕೆ ಸಹಜ ಸ್ಥಿತಿಗೆ ಬಾರದಿದ್ದಲ್ಲಿ ಭಕ್ತರಿಗೆ ನೀಡಲಾಗುವ ಮಧ್ಯಾಹ್ನದ ಭೋಜನ ಪ್ರಸಾದದ ಮೇಲೂ ಪರಿಣಾಮ ಬೀರಲಿದೆ. ಈಗಾಗಲೇ ಅನಿಲ ಪೂರೈಕೆ ಸಂಸ್ಥೆಗೆ ದಿನಕ್ಕೆ ಕನಿಷ್ಠ 20 ಸಿಲಿಂಡರ್ಗಳನ್ನು ಒದಗಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ತುರ್ತು ಪತ್ರ ಬರೆದಿದೆ.
ಮಧ್ಯಾಹ್ನದ ಭೋಜನಕ್ಕೂ ಸಂಕಷ್ಟ?
ಒಂದು ವೇಳೆ ಗ್ಯಾಸ್ ಪೂರೈಕೆ ಪುನರಾರಂಭಗೊಳ್ಳದಿದ್ದರೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭಕ್ತರಿಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm