ಬ್ರೇಕಿಂಗ್ ನ್ಯೂಸ್
12-03-26 10:47 pm mangalore ಕರಾವಳಿ
ಸುಳ್ಯ, ಮಾರ್ಚ್ 12: ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜು ಪಿ (42) ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಗುರುವಾರ ಸಂಭವಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮೆಡಿಕಲ್ ಶಾಪ್ಗೆ ತೆರಳಿದ್ದ ಮಂಜು ಅವರು ಅಲ್ಲಿಯೇ ಬಿದ್ದು ಕೊನೆಯುಸಿರೆಳೆದಿದ್ದಾರೆ.
ಮಂಜು ಅವರು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಬೆರಿಯಾ ಮೂಲದವರಾಗಿದ್ದು ಎಂದಿನಂತೆ ಇಂದು ಕಾಲೇಜಿಗೆ ಆಗಮಿಸಿ ವಿದ್ಯಾರ್ಥಿಗಳಿಗೆ ಪಾಠ ಬೋಧಿಸಿದ್ದರು. ಮಧ್ಯಾಹ್ನದ ಹೊತ್ತಿಗೆ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ತಮ್ಮ ಕೊಠಡಿಗೆ ತೆರಳುವುದಾಗಿ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.
ಬಳಿಕ ಅವರು ಸುಳ್ಯದ ಶ್ರೀರಾಮಪೇಟೆ ಪ್ರದೇಶದಲ್ಲಿರುವ ಮೆಡಿಕಲ್ ಶಾಪ್ಗೆ ಔಷಧ ಪಡೆಯಲು ತೆರಳಿದ್ದು ಅಲ್ಲಿಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಹೃದಯಾಘಾತ ಈ ದುರಂತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಮಂಜು ಅವರು ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದವರು. ಕೆ.ಆರ್.ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 10 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಬಳಿಕ, 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕನ್ನಡ ಉಪನ್ಯಾಸಕರಾಗಿ ನೇಮಕಗೊಂಡಿದ್ದರು. ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಬೆರೆತು ಪಾಠ ಬೋಧಿಸುವ ಶಿಕ್ಷಕರಾಗಿ ಅವರು ಗುರುತಿಸಿಕೊಂಡಿದ್ದರು ಎಂದು ಸಹೋದ್ಯೋಗಿಗಳು ಹೇಳಿದ್ದಾರೆ.
ಅವರ ಆಕಸ್ಮಿಕ ನಿಧನ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ದುಃಖದ ಛಾಯೆ ಮೂಡಿಸಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm