ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am